8:57 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು