1:00 PM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು