7:05 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಾಟಿಪಳ್ಳ: ಇಬ್ಬರು ಮಕ್ಕಳ ಜತೆ ತಾಯಿ ನಾಪತ್ತೆ; ಮಾಹಿತಿ ಸಿಕ್ಕಿದವರು ಪೊಲೀಸರ ಸಂಪರ್ಕಿಸಿ

29/03/2022, 09:56

ಮಂಗಳೂರು(reporterkarnataka.com):- ಕಾಟಿಪಳ್ಳ ಗ್ರಾಮದ ಗಣೇಶಪುರದಲ್ಲಿ ವಾಸವಿದ್ದ ಗೃಹಿಣಿಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದಾರೆ.

ಭಾರತಿ ಮಾದರ (35) ಎಂಬವರು  ಮಕ್ಕಳಾದ ಅಮೃತ (11) ಮತ್ತು ಗಣೇಶ್ (9) ಅವರೊಂದಿಗೆ ಮಾ.21ರ ರಾತ್ರಿ ಮನೆಯಿಂದ ತೆರಳಿದವರು ಇದೂವರೆಗೆ ವಾಪಸಾಗಿಲ್ಲ. ಅವರು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ- ಭಾರತಿ ಮಾದರ: ಎಣ್ಣೆ ಕಪ್ಪು ಮೈಬಣ್ಣ, ಸಾಧಾರಣ ಶರೀರ, 4 ಅಡಿ 6 ಇಂಚು ಎತ್ತರ, ಬಲಗೈಯಲ್ಲಿ ಎಚ್.ಬಿ. ಎಂಬ ಹಚ್ಚೆ ಇದೆ, ಕನ್ನಡ, ಹಿಂದಿ ಮತ್ತು ತುಳು ಭಾಷೆ ಅರ್ಥವಾಗುತ್ತದೆ. ಕಾಣೆಯಾಗುವ ಸಮಯದಲ್ಲಿ ಹಳದಿ ಬಣ್ಣದಲ್ಲಿ ಕೆಂಪು ಚುಕ್ಕೆಗಳಿರುವ ಸೀರೆ ಹಾಗೂ ಕಪ್ಪು ಬಣ್ಣದ ರವಿಕೆ ಧರಿಸಿರುತ್ತಾರೆ.

ಅಮೃತಾ: 3 ಅಡಿ 5ಇಂಚು ಎತ್ತರ, 5ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಧೋತಿ ಪ್ಯಾಂಟ್ ಮತ್ತು ಕೆಂಪು ಬಣ್ಣದ ಟಾಪ್ ಧರಿಸಿರುತ್ತಾಳೆ.

ಗಣೇಶ: 3 ಅಡಿ ಎತ್ತರ, 3ನೇ ತರಗತಿ ಓದುತ್ತಿದ್ದು, ಎಣ್ಣೆ ಕಪ್ಪು ಮೈಬಣ್ಣ, ಕನ್ನಡ ಭಾಷೆ ತಿಳಿದಿರುತ್ತದೆ, ಕಪ್ಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಬಣ್ಣದ ಚಡ್ಡಿ ಧರಿಸಿರುತ್ತಾರೆ.

ಈ ತಾಯಿ ಮಕ್ಕಳು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ದೂ.ಸಂಖ್ಯೆ: 0824-2220540, ಮೊ.ಸಂಖ್ಯೆ:- 9480805360, 9480802345, ಕಂಟ್ರೋಲ್ ರೂಂ: 0824-2220800 ಮೂಲಕ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      *

ಇತ್ತೀಚಿನ ಸುದ್ದಿ

ಜಾಹೀರಾತು