7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಾಟಿಪಳ್ಳ ಮಸೀದಿಗೆ ಕಲ್ಲುತೂರಾಟ ಪ್ರಕರಣ: 5 ಮಂದಿ ಆರೋಪಿಗಳ ಬಂಧನ

16/09/2024, 19:56

ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಕೃಷ್ಣಾಪುರ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿರುವ ಮಸ್ಜಿದುಲ್ ಹುದಾ ಜುಮಾ ಮಸೀದಿಯ ಕಿಟಕಿಗೆ ಕಲ್ಲು ಎಸೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುರತ್ಕಲ್ ಆಶ್ರಯ ಕಾಲೋನಿ ನಿವಾಸಿ ಭರತ್, ಕಟ್ಲ ಆಶ್ರಯ ಕಾಲೋನಿ ನಿವಾಸಿ ಚೆನ್ನಪ್ಪ, ಹಳೆಯಂಗಡಿ ಚೇಳಾಯರು ಖಂಡಿಗೆ ಪಾಡಿ ನಿವಾಸಿ ನಿತಿನ್, ಈಶ್ವರ ನಗರ ನಿವಾಸಿ ಮನು ಮತ್ತು ಮುಂಚೂರು ನಿವಾಸಿ ಸುಚಿತ್ ಎಂದು ಗುರುತಿಸಲಾಗಿದೆ.
ಜನತಾ ಕಾಲೋನಿಯ ಸ್ಮಶಾನದ ಕಡೆಯಿಂದ ಭಾನುವಾರ ರಾತ್ರಿ
ಎರಡು ಬೈಕ್ ಗಳಲ್ಲಿ ಆಗಮಿಸಿದ ಕಿಡಿಗೇಡಿಗಳು ಮಸ್ಜಿದುಲ್ ಮಸೀದಿಯ ಹಿಂಭಾಗದ ಕಿಟಕಿಗೆ ಕಲ್ಲು ಎಸೆದಿದ್ದಾರೆ. ಬಳಿಕ ಒಂದು ಬೈಕ್ ನಲ್ಲಿ ಮೂವರು ಗಣೇಶ್ ಕಟ್ಟೆಯ ಕಡೆ ತೆರಳಿದ್ದರು. ಮತ್ತೊಂದು ಬೈಕ್ ನಲ್ಲಿದ್ದ ಮತ್ತಿಬ್ಬರು ವಾಪಸ್ ಸ್ಮಶಾನದ ಕಡೆಗೆ ಬೈಕ್ ಚಲಾಯಿಸಿ ಪರಾರಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು