5:09 AM Wednesday22 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಕಬ್ಬಿಣದ ಏಣಿ ಕೊಂಡೊಯ್ಯುವಾಗ ವಿದ್ಯುತ್ ಸ್ಪರ್ಶ: ವ್ಯಕ್ತಿ ಸ್ಥಳದಲ್ಲೇ ದಾರುಣ ಸಾವು

08/08/2024, 23:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಬ್ಬಿಣದ ಏಣಿಯನ್ನ ಕೊಂಡೊಯ್ಯುವಾಗ ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಗದ್ಗಲ್ ಗ್ರಾಮದ ಬಳಿ ನಡೆದಿದೆ.
ಮೃತನನ್ನ 48 ವರ್ಷದ ಪ್ರಸನ್ನ ಸಾಲ್ಡನ್ ಎಂದು ಗುರುತಿಸಲಾಗಿದೆ. ಮೃತ ಪ್ರಸನ್ನ ಮನೆಯಲ್ಲಿ ಬೇರೆ ಕೆಲಸದ ನಿಮಿತ್ತ ಕಾಫಿ ತೋಟದಿಂದ ಕಬ್ಬಿಣದ ಏಣಿಯನ್ನ ಮನೆಗೆ ತಂದಿದ್ದರು. ಕೆಲಸವಾದ ಬಳಿಕ ಏಣಿಯನ್ನ ಮತ್ತೆ ಕಾಫಿ ತೋಟಕ್ಕೆ ಇಡಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಬ್ಬಿಣದ ಏಣಿಯಾದ ಕಾರಣ ವಿದ್ಯುತ್ ಸ್ಪರ್ಶಿಸಿದ ಕೂಡಲೇ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಮನೆಯಿಂದ ಏಣಿಯನ್ನ ಕೊಂಡೊಯ್ಯುವಾಗ ಗಬ್ಗಲ್ ಗ್ರಾಮದ ಶಾಲೆ ಪಕ್ಕ ಎತ್ತರದ ಪ್ರದೇಶದಲ್ಲಿ ಏಣಿಯನ್ನ ಹೊತ್ತುಕೊಂಡು ಹೋಗುವಾಗ ಏಣಿ ವಿದ್ಯುತ್ ತಂತಿಗೆ ತಗುಲಿ ಸಾವನಪ್ಪಿದ್ದಾರೆ. ಮಲೆನಾಡ ಭಾರೀ ಗಾಳಿ-ಮಳೆಗೆ ವಿದ್ಯುತ್ ತಂತಿಗಳು ಕೂಡ ಜಗ್ಗಿದ್ದವು. ಅತ್ಯಂತ ಕೆಳಭಾಗದಲ್ಲಿ ಇದ್ದ ವಿದ್ಯುತ್ ತಂತಿಗಳಿಂದ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು