12:19 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಬೆಳ್ತಂಗಡಿ ಶಾಖೆ ಶೀಘ್ರದಲ್ಲಿ ಆರಂಭ

28/08/2025, 12:49

ಮಂಗಳೂರು(reporterkarnataka.com): ನಗರದ ಬೆಂದೂರ್‌ವೆಲ್ ನಲ್ಲಿ ಕೇಂದ್ರ ಕಛೇರಿ ಹೊಂದಿರುವ ಕಚ್ಚೂರು ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ (ಲಿ.) ಇದರ ಬೆಳ್ತಂಗಡಿ ಶಾಖೆಯು ಶೀಘ್ರದಲ್ಲಿ ಅಂದರೆ ಮುಂದಿನ ನವರಾತ್ರಿ ದಸರಾ ದಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸೊಸೈಟಿಯ ಪ್ರಕಟಣೆ ತಿಳಿಸಿದೆ.
ಪ್ರಸ್ತುತ ಸೊಸೈಟಿಯ ಶಾಖೆಯು ಮಂಗಳೂರು, ಸುರತ್ಕಲ್, ಉಡುಪಿ ಹಾಗೂ ಬಂಟ್ವಾಳದಲ್ಲಿದ್ದು, ನೂತನ ಶಾಖೆಯನ್ನು ಬೆಳ್ತಂಗಡಿ ಚರ್ಚ್ ರೋಡ್ ಹತ್ತಿರ ನೊರೊನ ಕಾಂಪ್ಲೆಕ್ಸ್ ನಲ್ಲಿ ತೆರೆಯಲು ಸಜ್ಜಾಗಿದೆ. 30 ವರ್ಷಗಳ ವಿಶ್ವಾಸಾರ್ಹ ಸೇವೆ ಮಾಡುತ್ತಾ ಬಂದಿರುವ ಸೊಸೈಟಿಯು ಸತತ ಲಾಭ ಗಳಿಕೆಯೊಂದಿಗೆ, ಸದಸ್ಯರಿಗೆ ಸತತ 20% ಡಿವಿಡೆಂಡ್ ನೀಡುತ್ತಾ ಬರುತ್ತಿದೆ. ಸರ್ಕಾರದ ಅಡಿಟ್ ವರ್ಗೀಕರಣದಲ್ಲಿ ಸತತ ‘ಎ’ವರ್ಗ ಪಡೆಯುವುದರೊಂದಿಗೆ ಉತ್ತಮ ಅಭಿವೃದ್ಧಿಗೆ ಎಸ್ ಡಿ ಸಿ ಸಿ ಬ್ಯಾಂಕ್ ಸಾಧನ ಪ್ರಶಸ್ತಿಯನ್ನು ಸತತ ಪಡೆಯುತ್ತಾ ಬರುತ್ತಿದೆ.
ಎಲ್ಲಾ ಶಾಖೆಗಳು ಕಂಪ್ಯೂಟರಿಕೃತ ಲೆಕ್ಕಪತ್ರವ್ಯವಸ್ಥೆ ಎಲ್ಲಾ ಭದ್ರತಾ ವ್ಯವಸೆಗಳೊಂದಿಗೆ ಗ್ರಾಹಕರಿಗೆ ಉತ್ತಮ ಬ್ಯಾಂಕಿಂಗ್ ಸೇವೆ ನೀಡುತ್ತಾ ಬರುತ್ತಿದೆ. ಬೆಳ್ತಂಗಡಿ ಶಾಖೆಯು ಆರಂಭದ ಕೊಡುಗೆಯಾಗಿ ಸಾಮಾನ್ಯ ಠೇವಣಿ 1 ವರ್ಷಕ್ಕೆ 8.50%, 2 ವರ್ಷಕ್ಕೆ 9%, 3 ವರ್ಷಕ್ಕೆ 9.50% ಹಾಗೂ ಹಿರಿಯ ನಾಗರಿಕರಿಗೆ 1 ವರ್ಷಕ್ಕೆ 9%, 2 ವರ್ಷಕ್ಕೆ 9.50%, 3 ವರ್ಷಕ್ಕೆ 10% ನೀಡುತ್ತಿದ್ದು ಗ್ರಾಹಕ ಬಂಧುಗಳು ಕೆಲವೇ ದಿನಗಳ ಅವಧಿ ನೀಡುವ ಈ ಕೊಡುಗೆಯ ಸದುಪಯೋಗ ಪಡೆದುಕೊಳ್ಳಲು ಸೊಸೈಟಿಯ ಪ್ರಕಟಣೆಯಲ್ಲಿ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು