5:29 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಕಡಬ: ಕಾಡಾನೆ ಅಟ್ಟಹಾಸ; ಸಲಗ ದಾಳಿಗೆ ಯುವತಿ ಸೇರಿ 2 ಮಂದಿ ದಾರುಣ ಸಾವು

20/02/2023, 16:58

ಕಡಬ(reporterkarnataka.com): ಮಲೆನಾಡು ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದ ಕಾಡಾನೆ ಹಾವಳಿ ಇದೀಗ ಕರಾವಳಿ ಜಿಲ್ಲೆಯಾದ ದ.ಕ.ಕ್ಕೂ ತಟ್ಟಿದೆ. ಕರಾವಳಿಯ ಅರೆ ಮಲೆನಾಡಿನಿಂದಾವೃತವಾಗಿರುವ ಕಡಬ ಸಮೀಪದ ಕುಟ್ರುಪಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಈ ದುರ್ಘಟನೆ ಸೋಮವಾರ ನಡೆದಿದೆ.

ಮೃತರನ್ನು ರಂಜಿತಾ (21) ಹಾಗೂ ರಮೇಶ್ ರೈ(55) ಎಂದು ಗುರುತಿಸಲಾಗಿದೆ. ರಂಜಿತಾ ಪೇರಡ್ಕ ಹಾಲು ಉತ್ಪಾದಕ ಸೊಸೈಟಿಯಲ್ಲಿ ಸಿಬ್ಬಂದಿ ಆಗಿದ್ದು, ಬೆಳಗ್ಗೆ ಎಂದಿನಂತೆ ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕರ್ಮೇಣ ಎಂಬಲ್ಲಿ ಅವರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಅವರು ಬೊಬ್ಬೆ ಹಾಕಿಕೊಳ್ಳುವುದನ್ನು ಕೇಳಿ ಅಲ್ಲೇ ಪಕ್ಕದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಅವರು ರಂಜಿತಾ ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಮೇಲೂ ಆನೆ ದಾಳಿ ನಡೆಸಿದೆ. ಹೊಟ್ಟೆ ಭಾಗಕ್ಕೆ ತಿವಿತದ ಪರಿಣಾಮ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ರಂಜಿತಾರನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಅಷ್ಟರಲ್ಲಿ ಮೃತಪಟ್ಟಿದ್ದರು ಎಂಬ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು