12:42 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕಡಬ: ಕಾಡಾನೆ ಅಟ್ಟಹಾಸ; ಸಲಗ ದಾಳಿಗೆ ಯುವತಿ ಸೇರಿ 2 ಮಂದಿ ದಾರುಣ ಸಾವು

20/02/2023, 16:58

ಕಡಬ(reporterkarnataka.com): ಮಲೆನಾಡು ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದ ಕಾಡಾನೆ ಹಾವಳಿ ಇದೀಗ ಕರಾವಳಿ ಜಿಲ್ಲೆಯಾದ ದ.ಕ.ಕ್ಕೂ ತಟ್ಟಿದೆ. ಕರಾವಳಿಯ ಅರೆ ಮಲೆನಾಡಿನಿಂದಾವೃತವಾಗಿರುವ ಕಡಬ ಸಮೀಪದ ಕುಟ್ರುಪಾಡಿ ಗ್ರಾಮದಲ್ಲಿ ಕಾಡಾನೆ ದಾಳಿಗೆ ಇಬ್ಬರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಈ ದುರ್ಘಟನೆ ಸೋಮವಾರ ನಡೆದಿದೆ.

ಮೃತರನ್ನು ರಂಜಿತಾ (21) ಹಾಗೂ ರಮೇಶ್ ರೈ(55) ಎಂದು ಗುರುತಿಸಲಾಗಿದೆ. ರಂಜಿತಾ ಪೇರಡ್ಕ ಹಾಲು ಉತ್ಪಾದಕ ಸೊಸೈಟಿಯಲ್ಲಿ ಸಿಬ್ಬಂದಿ ಆಗಿದ್ದು, ಬೆಳಗ್ಗೆ ಎಂದಿನಂತೆ ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕರ್ಮೇಣ ಎಂಬಲ್ಲಿ ಅವರ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಅವರು ಬೊಬ್ಬೆ ಹಾಕಿಕೊಳ್ಳುವುದನ್ನು ಕೇಳಿ ಅಲ್ಲೇ ಪಕ್ಕದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಅವರು ರಂಜಿತಾ ಅವರನ್ನು ರಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅವರ ಮೇಲೂ ಆನೆ ದಾಳಿ ನಡೆಸಿದೆ. ಹೊಟ್ಟೆ ಭಾಗಕ್ಕೆ ತಿವಿತದ ಪರಿಣಾಮ ರಮೇಶ್ ರೈ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ರಂಜಿತಾರನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರು ಅಷ್ಟರಲ್ಲಿ ಮೃತಪಟ್ಟಿದ್ದರು ಎಂಬ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು