10:06 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ. ಮಹೇಶ್ ಮಾನನಷ್ಟ ಮೊಕದ್ದಮೆ

11/09/2022, 16:26

ಬೆಂಗಳೂರು(reporterkarnataka.com):ಭೂ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಾ.ರಾ. ಮಹೇಶ್ ಅವರು ಖಡಕ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾದ ರೋಹಿಣಿ ಸಿಂಧೂರಿ ವಿರುದ್ಧ ಮಾನ ನಷ್ಟ ಮೊಕದ್ದವೆ ಹೂಡುವ ಸಂಬಂಧ ಲೀಗಲ್ ನೋಟಿಸ್ ನೀಡಿದ್ದಾರೆ.

ಸಾ.ರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ವಿಚಾರವಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು.ಈ  ವಿಚಾರವಾಗಿ ಸಾ.ರಾ ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಈ ಹಿನ್ನಲೆ ರೋಹಿಣಿ ಸಿಂಧೂರಿ ಯವರಿಗೆ ಲೀಗಲ್ ನೋಟಿಸ್ ಅನ್ನು ಕೂಡ ಜಾರಿಗೊಳಿಸಲಾಗಿದ್ದು, ಅಧಿಕಾರಿ ಇದಕ್ಕೆ ಉತ್ತರ ಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ಶಾಸಕ ಸಾ.ರಾ ಮಹೇಶ್ ಹಿಂದಿನ ಜಿಲ್ಲಾಧಿಕಾರಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಸರಕಾರಿ ಹಣ ದುರ್ವಿನಿಯೋಗವಾಗಿದೆ, ಕೋವಿಡ್ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡದೆ ಬೇಜವಾಬ್ದಾರಿಯಿಂದ ವರ್ತನೆ ಮಾಡಿದ್ದಾರೆ. ಈ ಬಗ್ಗೆ ಚೀಫ್ ಸೆಕ್ರೆಟರಿ ವರದಿ ಬಂದ ನಂತರ ವರ್ಗಾವಣೆ ಮಾಡಿದ್ದು, ಆದರೆ ಅದೇ ಕಾರಣಕ್ಕೆ ನನ್ನ ವಿರುದ್ಧ ಭೂಹಗರಣದ ಆರೋಪ ಮಾಡಲಾಗಿದೆ. ಭೂ ಅಕ್ರಮದ ಕಾರಣಕ್ಕೆ ವರ್ಗಾವಣೆಯಾಗಿದೆ ಎಂದು ಬಿಂಬಿಸಿದ್ದಾರೆ. ಆ ಸಮಯದಲ್ಲಿ ನಾನು ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದೆ. ಅದರಂತೆ ಮೈಸೂರಿನ ನ್ಯಾಯಾಲಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಹೂಡಿದ್ದೇನೆ ಎಂದು ಮೈಸೂರಿನಲ್ಲಿ ಶಾಸಕ ಸಾರಾ ಮಹೇಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು