6:02 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಖಡಕ್ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ. ಮಹೇಶ್ ಮಾನನಷ್ಟ ಮೊಕದ್ದಮೆ

11/09/2022, 16:26

ಬೆಂಗಳೂರು(reporterkarnataka.com):ಭೂ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಸಾ.ರಾ. ಮಹೇಶ್ ಅವರು ಖಡಕ್ ಐಎಎಸ್ ಅಧಿಕಾರಿ ಎಂದೇ ಖ್ಯಾತರಾದ ರೋಹಿಣಿ ಸಿಂಧೂರಿ ವಿರುದ್ಧ ಮಾನ ನಷ್ಟ ಮೊಕದ್ದವೆ ಹೂಡುವ ಸಂಬಂಧ ಲೀಗಲ್ ನೋಟಿಸ್ ನೀಡಿದ್ದಾರೆ.

ಸಾ.ರಾ ಮಹೇಶ್ ಭೂ ಅಕ್ರಮ ಮಾಡಿದ್ದಾರೆ ಎಂಬ ವಿಚಾರವಾಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿತ್ತು.ಈ  ವಿಚಾರವಾಗಿ ಸಾ.ರಾ ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಹೇಳಿಕೆ ನೀಡಿದ್ದರು. ಈ ಹಿನ್ನಲೆ ರೋಹಿಣಿ ಸಿಂಧೂರಿ ಯವರಿಗೆ ಲೀಗಲ್ ನೋಟಿಸ್ ಅನ್ನು ಕೂಡ ಜಾರಿಗೊಳಿಸಲಾಗಿದ್ದು, ಅಧಿಕಾರಿ ಇದಕ್ಕೆ ಉತ್ತರ ಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ಶಾಸಕ ಸಾ.ರಾ ಮಹೇಶ್ ಹಿಂದಿನ ಜಿಲ್ಲಾಧಿಕಾರಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ. ಸರಕಾರಿ ಹಣ ದುರ್ವಿನಿಯೋಗವಾಗಿದೆ, ಕೋವಿಡ್ ಸಂದರ್ಭದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡದೆ ಬೇಜವಾಬ್ದಾರಿಯಿಂದ ವರ್ತನೆ ಮಾಡಿದ್ದಾರೆ. ಈ ಬಗ್ಗೆ ಚೀಫ್ ಸೆಕ್ರೆಟರಿ ವರದಿ ಬಂದ ನಂತರ ವರ್ಗಾವಣೆ ಮಾಡಿದ್ದು, ಆದರೆ ಅದೇ ಕಾರಣಕ್ಕೆ ನನ್ನ ವಿರುದ್ಧ ಭೂಹಗರಣದ ಆರೋಪ ಮಾಡಲಾಗಿದೆ. ಭೂ ಅಕ್ರಮದ ಕಾರಣಕ್ಕೆ ವರ್ಗಾವಣೆಯಾಗಿದೆ ಎಂದು ಬಿಂಬಿಸಿದ್ದಾರೆ. ಆ ಸಮಯದಲ್ಲಿ ನಾನು ಮಾನನಷ್ಟ ಮೊಕದ್ದಮೆ ಹಾಕುವುದಾಗಿ ತಿಳಿಸಿದ್ದೆ. ಅದರಂತೆ ಮೈಸೂರಿನ ನ್ಯಾಯಾಲಯದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನನಷ್ಟ ಹೂಡಿದ್ದೇನೆ ಎಂದು ಮೈಸೂರಿನಲ್ಲಿ ಶಾಸಕ ಸಾರಾ ಮಹೇಶ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು