4:12 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ: ಕ್ಲಾಕ್ ಟವರ್ ನಿಂದ ಆರಂಭ

29/04/2023, 19:32

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರು ಶನಿವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಬಿಗಿ ಬಂದೋಬಸ್ತ್ ನಡುವೆ ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಅಮಿತ್ ಶಾ ಅವರ ರೋಡ್ ಶೋ ಆರಂಭವಾಯಿತು. ರಸ್ತೆಯ ಇಕ್ಕಡೆಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅಮಿತ್ ಶಾ ಅವರು ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಸಾವಿರಾರು ಜನರತ್ತ ಕೈಬೀಸಿದರು. ಕ್ಲಾಕ್ ಟವರ್ ನಿಂದ ಸಂಜೆ 6.35ಕ್ಕೆ ರೋಡ್ ಶೋ ಆರಂಭವಾಯಿತು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,‌ ಪಕ್ಷದ ಅಭ್ಯರ್ಥಿ ಗಳಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಸತೀಶ್ ಕುಂಪಲ, ಉಮಾನಾಥ ಕೋಟ್ಯಾನ್, ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮುಂತಾದವರು ಉಪಸ್ಥಿತರಿದ್ದರು.


ಕ್ಲಾಕ್ ಟವರ್ ನಿಂದ ಆರಂಭವಾದ ರೋಡ್ ಶೋ
ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ಬಳಿ ಸಮಾಪ್ತಿಗೊಂಡಿತು. ಗೋವಿಂದ ಪೈ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು.
ರೋಡ್ ಶೋ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಪ್ರದೇಶವನ್ನು ಕೇಸರಿಮಯ ಮಾಡಲಾಗಿತ್ತು. ಕ್ಲಾಕ್ ಟವರ್ ಸುತ್ತ ಬಿಜೆಪಿ ಬಾವುಟ ಹಾರುತ್ತಿತ್ತು.
ಶಾ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿತ್ತು. ವಾಹನಗಳ ಸಂಖ್ಯೆ ಇಳಿಮುಖವಾಗಿತ್ತು. ಹಂಪನಕಟ್ಟೆ ಪ್ರದೇಶದ ಅಂಡರ್ ಪಾಸ್ ನ ಬಾಗಿಲು ಹಾಕಿ ಮುಚ್ಚಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು