11:05 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ: ಕ್ಲಾಕ್ ಟವರ್ ನಿಂದ ಆರಂಭ

29/04/2023, 19:32

ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರಾರ್ಥವಾಗಿ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಅವರು ಶನಿವಾರ ಕಡಲನಗರಿ ಮಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಬಿಗಿ ಬಂದೋಬಸ್ತ್ ನಡುವೆ ನಗರದ ಪುರಭವನ ಸಮೀಪದ ಕ್ಲಾಕ್‌ ಟವರ್‍‌ನಿಂದ ಅಮಿತ್ ಶಾ ಅವರ ರೋಡ್ ಶೋ ಆರಂಭವಾಯಿತು. ರಸ್ತೆಯ ಇಕ್ಕಡೆಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅಮಿತ್ ಶಾ ಅವರು ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಸಾವಿರಾರು ಜನರತ್ತ ಕೈಬೀಸಿದರು. ಕ್ಲಾಕ್ ಟವರ್ ನಿಂದ ಸಂಜೆ 6.35ಕ್ಕೆ ರೋಡ್ ಶೋ ಆರಂಭವಾಯಿತು. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,‌ ಪಕ್ಷದ ಅಭ್ಯರ್ಥಿ ಗಳಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಸತೀಶ್ ಕುಂಪಲ, ಉಮಾನಾಥ ಕೋಟ್ಯಾನ್, ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮುಂತಾದವರು ಉಪಸ್ಥಿತರಿದ್ದರು.


ಕ್ಲಾಕ್ ಟವರ್ ನಿಂದ ಆರಂಭವಾದ ರೋಡ್ ಶೋ
ಕೊಡಿಯಾಲ್‌ಬೈಲ್‌ನ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸರ್ಕಲ್‌ ಬಳಿ ಸಮಾಪ್ತಿಗೊಂಡಿತು. ಗೋವಿಂದ ಪೈ ಸರ್ಕಲ್ ಬಳಿ ಭಾರೀ ಸಂಖ್ಯೆಯಲ್ಲಿ ಜನರು ನೆರೆದಿದ್ದರು.
ರೋಡ್ ಶೋ ಹಿನ್ನೆಲೆಯಲ್ಲಿ ನಗರದ ಕ್ಲಾಕ್ ಟವರ್ ಪ್ರದೇಶವನ್ನು ಕೇಸರಿಮಯ ಮಾಡಲಾಗಿತ್ತು. ಕ್ಲಾಕ್ ಟವರ್ ಸುತ್ತ ಬಿಜೆಪಿ ಬಾವುಟ ಹಾರುತ್ತಿತ್ತು.
ಶಾ ಭೇಟಿ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸಂಚಾರ ವ್ಯವಸ್ಥೆಯಲ್ಲಿಯೂ ಬದಲಾವಣೆ ಮಾಡಲಾಗಿತ್ತು. ವಾಹನಗಳ ಸಂಖ್ಯೆ ಇಳಿಮುಖವಾಗಿತ್ತು. ಹಂಪನಕಟ್ಟೆ ಪ್ರದೇಶದ ಅಂಡರ್ ಪಾಸ್ ನ ಬಾಗಿಲು ಹಾಕಿ ಮುಚ್ಚಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು