4:43 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮೇಳೈಸಿದ ಕುಡ್ಲದ ಪಿಲಿಪರ್ಬ-2024 ಸೀಸನ್ 3: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೊಮ್ಮೆ ಮೆಲುಕು

11/10/2024, 22:14

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ
ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3ರ ಉದ್ಘಾಟನಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪಿಲಿಪರ್ಬ ಮೇಳೈಸಿತು.ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು, ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.


ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಿದ್ದು, ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು