4:51 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮೇಳೈಸಿದ ಕುಡ್ಲದ ಪಿಲಿಪರ್ಬ-2024 ಸೀಸನ್ 3: ತುಳುನಾಡಿನ ಗತವೈಭವದ ಘನ ಪರಂಪರೆ ಮತ್ತೊಮ್ಮೆ ಮೆಲುಕು

11/10/2024, 22:14

ಮಂಗಳೂರು(reporterkarnataka.com): ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ
ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3ರ ಉದ್ಘಾಟನಾ ಸಮಾರಂಭ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಡಿ. ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಪಿಲಿಪರ್ಬ ಮೇಳೈಸಿತು.ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು, ಸಾಂಪ್ರದಾಯಿಕ ಕಲೆಯಾಗಿರುವ ಈ ಹುಲಿವೇಷಕ್ಕೆ ಇಂದು ಸ್ಪರ್ಧಾಕೂಟದ ಸ್ಪರ್ಶ ಲಭಿಸಿದೆ. ಜಿಲ್ಲೆಯ ಅನುಭವಿ ಹಾಗೂ ನುರಿತ ತೀರ್ಪುಗಾರರ ಸಮ್ಮುಖದಲ್ಲಿ ನಡೆಯಲಿರುವ ಈ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಎಲ್ಲಾ 10 ಹುಲಿವೇಷ ತಂಡಗಳಿಗೂ ಗಣ್ಯರು ಶುಭ ಹಾರೈಸಿ ಹುಲಿವೇಷ ತಂಡಗಳನ್ನು ಪ್ರೋತ್ಸಾಹಿಸಲು ಆಗಮಿಸಿದ ಎಲ್ಲರಿಗೂ ಹಾರ್ದಿಕ ಸ್ವಾಗತವನ್ನು ಕೋರಿದರು.


ಸ್ಪರ್ಧಾಕೂಟವು ಇಂದು ರಾತ್ರಿಯವರೆಗೂ ಅದ್ದೂರಿಯಾಗಿ ಸಾಗಿದ್ದು, ಅಂತಿಮವಾಗಿ ವಿಜೇತ ತಂಡದ ಘೋಷಣೆಯಾಗಲಿದೆ. ಈ ನಡುವೆ ವೀಕ್ಷಕರಿಗಾಗಿ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯನ್ನೂ ಮಾಡಲಾಗಿದೆ.
ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ. ಬ್ರಿಜೇಶ್ ಚೌಟ, ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಉಪ ಮೇಯರ್ ಭಾನುಮತಿ, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್, ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್, ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರಿಧರ್ ಶೆಟ್ಟಿ, ಅಧ್ಯಕ್ಷ ದಿವಾಕರ್ ಪಾಂಡೇಶ್ವರ, ಪ್ರಮುಖರಾದ ನರೇಶ್ ಶೆಣೈ, ಲಲಿತ್ ಮೆಂಡನ್, ಶಾನ್ ಕೋಡಿಕೆರೆ, ಜಗದೀಶ್ ಕದ್ರಿ, ಅಶ್ವಿತ್ ಕೊಟ್ಟಾರಿ ಸೇರಿದಂತೆ ಮ.ನ.ಪಾ ಸದಸ್ಯರು ಹಾಗೂ ಅನೇಕ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು