8:28 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಪ್ರಧಾನಿ ರೋಡ್‌ ಶೋ: ಜನರ ಹರ್ಷೋದ್ಘಾರ ನಡುವೆ ಕೈಬೀಸುತ್ತಾ 2 ಕಿಮೀ ಸಾಗಿದ ಮೋದಿ

14/04/2024, 20:57

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಭಾನುವಾರ ರೋಡ್ ಶೋ ನಡೆಸಿದರು.







ಬಜಪೆ ವಿಮಾನ ನಿಲ್ದಾಣದಿಂದ ಲೇಡಿಹಿಲ್ ಸಮೀಪದ ಶ್ರೀ ನಾರಾಯಣ ಗುರು ವೃತ್ತಕ್ಕೆ ಆಗಮಿಸಿದ ಪ್ರಧಾನಿ ಅವರು ಗುರುಗಳ ಮೂರ್ತಿಗೆ ಹಾರಾರ್ಪಣೆ ಮಾಡಿ ರೋಡ್ ಶೋ ಆರಂಭಿಸಿದರು. ತೆರೆದ ವಾಹನದಲ್ಲಿ ಮೋದಿ ಅವರು ಎಂ.ಜಿ. ರಸ್ತೆಯಾಗಿ, ಪಿವಿಎಸ್ ಜಂಕ್ಷನ್ ನಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲೆಗಳಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು, ಮೋದಿ ಅಭಿಮಾನಿಗಳು, ಸಾರ್ವಜನಿಕರು ಸೇರಿದ್ದರು. ಜನರು ಹರ್ಷೋದ್ಘಾರ ನಡುವೆ ಹೂವಿನ ಪಕಳವನ್ನು ಪ್ರಧಾನಿಯತ್ತ ಚೆಲ್ಲಿ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಿ ಜನಸಮೂಹದತ್ತ ಕೈಬೀಸುತ್ತಲೇ ಸಾಗಿದರು. ನವಭಾರತ ಸರ್ಕಲ್ ಬಳಿ ರೋಡ್ ಶೋ ಸಮಾಪ್ತಿಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು