10:40 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಏಪ್ರಿಲ್ 8, 9ರಂದು ‘ಮಂಗಳೂರು ಲಿಟ್ ಫೆಸ್ಟ್’

07/04/2022, 10:30

ಮಂಗಳೂರು(reporterkarnataka.com): ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಏ.8, 9ರಂದು ನಗರದ  ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದೆ.

ಪ್ರಾಚೀನ ಭಾರತೀಯ ಶಾಂತಿ, ಸಮೃದ್ಧತೆ ಹಾಗೂ ಸಮಷ್ಟಿ ಹಿತದ ಪರಿಕಲ್ಪನೆಯನ್ನು ಪ್ರದರ್ಶಿಸುವ ಉದ್ದೇಶದಲ್ಲಿ ನಡೆಯುವ ಈ ಲಿಟ್ ಫೆಸ್ಟ್‌ನಲ್ಲಿ, ಅನೇಕ ಸಮಕಾಲೀನ ವಿಚಾರಗಳೂ ಚರ್ಚೆಗೊಳಗಾಗಲಿವೆ. ಚರ್ಚಾ ಕಾರ್ಯಕ್ರಮದಲ್ಲಿ ಶತಾವಧಾನಿ ಡಾ.ಆರ್. ಗಣೇಶ್ ಪಾಲ್ಗೊಳ್ಳಲಿರುವರು. ರಷ್ಯಾ-ಯೂಕ್ರೇನ್ ಬಿಕ್ಕಟ್ಟು ಭಾರತೀಯ ದೃಷ್ಟಿಕೋನದ ಬಗ್ಗೆ ಡಾ.ದತ್ತೇಶ್ ಪ್ರಭು ಪಾರುಲ್ಕರ್, ಸುಮಿತ್ ಪಾಂಡೆ, ನಯನಾ ಆನಂದ್ ವಿಮರ್ಶಿಸುವರು. ಭಾಷೆ ಮತ್ತು ತಂತ್ರಜ್ಞಾನದ ಬಗ್ಗೆ ಕೆ.ಪಿ.ರಾವ್ ಹಾಗೂ ಬೇಳೂರು ಸುದರ್ಶನ ಮಾತನಾಡುವರು, ಕಾಶ್ಮೀರದ ಕಥೆಗಳು ಎಂಬ ಗೋಷ್ಠಿಯನ್ನು ಲೇಖಕಿ ಸಹನ ವಿಜಯ್ ಕುಮಾರ್ ಹಾಗೂ ಅಜೇಯ್ ಭಾರತಿ ನಿರ್ವಹಿಸುವರು. ಬೋಸ್ ಅವರ ಇನ್ನೂ ಹೇಳದ ಕಥೆ ಎಂಬ ವಿಚಾರವಾಗಿ ಅನುಜ್ ಧರ್, ಚಂದ್ರಚೂಡ್ ಬೋಸ್, ನವನೀತ್ ಕೃಷ್ಣ ಚರ್ಚಿಸಲಿದ್ದಾರೆ.

ಎರಡನೇ ದಿನದ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ, ಅರವಿಂದ ಚೊಕ್ಕಾಡಿ ಮತ್ತು ಅಶ್ವಿನಿ ದೇಸಾಯಿ ಪಠ್ಯ ವಿಮರ್ಶೆ ಕೈಗೊಳ್ಳುವರು. ಕನ್ನಡಿಗರ ಕಣ್ಣಲ್ಲಿ ಸಾಂಸ್ಕೃತಿಕ ಭಾರತ ಎಂಬ ವಿಚಾರವಾಗಿ ಡಾ.ಜೆ.ಬಿ.ಹರೀಶ, ಡಾ.ನಿರಂಜನ ವಾನಳ್ಳಿ ಮತ್ತು ಜಿ.ಆರ್.ಸಂತೋಷ್ ಮಾತನಾಡುವರು, ಕಶ್ಮೀರ್ ಫೈಲ್ಸ್ ರೀಲ್ ಮತ್ತು ರಿಯಲ್’ ಎಂಬ ವಿಚಾರವಾಗಿ ಕಲಾವಿದ ಪ್ರಕಾಶ್ ಬೆಳವಾಡಿ, ನಾಗರಿಕತೆಯ ನಿರೂಪಣೆ ಎಂಬ ವಿಚಾರವಾಗಿ ನಿತಿನ್ ಶ್ರೀಧರ್, ಸಾಯಿಸ್ವರೂಪ ಅಯ್ಯರ್, ಗಣತ್ರ ಸಮಾಲೋಚಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು