8:06 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಏಪ್ರಿಲ್ 8, 9ರಂದು ‘ಮಂಗಳೂರು ಲಿಟ್ ಫೆಸ್ಟ್’

07/04/2022, 10:30

ಮಂಗಳೂರು(reporterkarnataka.com): ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಏ.8, 9ರಂದು ನಗರದ  ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದೆ.

ಪ್ರಾಚೀನ ಭಾರತೀಯ ಶಾಂತಿ, ಸಮೃದ್ಧತೆ ಹಾಗೂ ಸಮಷ್ಟಿ ಹಿತದ ಪರಿಕಲ್ಪನೆಯನ್ನು ಪ್ರದರ್ಶಿಸುವ ಉದ್ದೇಶದಲ್ಲಿ ನಡೆಯುವ ಈ ಲಿಟ್ ಫೆಸ್ಟ್‌ನಲ್ಲಿ, ಅನೇಕ ಸಮಕಾಲೀನ ವಿಚಾರಗಳೂ ಚರ್ಚೆಗೊಳಗಾಗಲಿವೆ. ಚರ್ಚಾ ಕಾರ್ಯಕ್ರಮದಲ್ಲಿ ಶತಾವಧಾನಿ ಡಾ.ಆರ್. ಗಣೇಶ್ ಪಾಲ್ಗೊಳ್ಳಲಿರುವರು. ರಷ್ಯಾ-ಯೂಕ್ರೇನ್ ಬಿಕ್ಕಟ್ಟು ಭಾರತೀಯ ದೃಷ್ಟಿಕೋನದ ಬಗ್ಗೆ ಡಾ.ದತ್ತೇಶ್ ಪ್ರಭು ಪಾರುಲ್ಕರ್, ಸುಮಿತ್ ಪಾಂಡೆ, ನಯನಾ ಆನಂದ್ ವಿಮರ್ಶಿಸುವರು. ಭಾಷೆ ಮತ್ತು ತಂತ್ರಜ್ಞಾನದ ಬಗ್ಗೆ ಕೆ.ಪಿ.ರಾವ್ ಹಾಗೂ ಬೇಳೂರು ಸುದರ್ಶನ ಮಾತನಾಡುವರು, ಕಾಶ್ಮೀರದ ಕಥೆಗಳು ಎಂಬ ಗೋಷ್ಠಿಯನ್ನು ಲೇಖಕಿ ಸಹನ ವಿಜಯ್ ಕುಮಾರ್ ಹಾಗೂ ಅಜೇಯ್ ಭಾರತಿ ನಿರ್ವಹಿಸುವರು. ಬೋಸ್ ಅವರ ಇನ್ನೂ ಹೇಳದ ಕಥೆ ಎಂಬ ವಿಚಾರವಾಗಿ ಅನುಜ್ ಧರ್, ಚಂದ್ರಚೂಡ್ ಬೋಸ್, ನವನೀತ್ ಕೃಷ್ಣ ಚರ್ಚಿಸಲಿದ್ದಾರೆ.

ಎರಡನೇ ದಿನದ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ, ಅರವಿಂದ ಚೊಕ್ಕಾಡಿ ಮತ್ತು ಅಶ್ವಿನಿ ದೇಸಾಯಿ ಪಠ್ಯ ವಿಮರ್ಶೆ ಕೈಗೊಳ್ಳುವರು. ಕನ್ನಡಿಗರ ಕಣ್ಣಲ್ಲಿ ಸಾಂಸ್ಕೃತಿಕ ಭಾರತ ಎಂಬ ವಿಚಾರವಾಗಿ ಡಾ.ಜೆ.ಬಿ.ಹರೀಶ, ಡಾ.ನಿರಂಜನ ವಾನಳ್ಳಿ ಮತ್ತು ಜಿ.ಆರ್.ಸಂತೋಷ್ ಮಾತನಾಡುವರು, ಕಶ್ಮೀರ್ ಫೈಲ್ಸ್ ರೀಲ್ ಮತ್ತು ರಿಯಲ್’ ಎಂಬ ವಿಚಾರವಾಗಿ ಕಲಾವಿದ ಪ್ರಕಾಶ್ ಬೆಳವಾಡಿ, ನಾಗರಿಕತೆಯ ನಿರೂಪಣೆ ಎಂಬ ವಿಚಾರವಾಗಿ ನಿತಿನ್ ಶ್ರೀಧರ್, ಸಾಯಿಸ್ವರೂಪ ಅಯ್ಯರ್, ಗಣತ್ರ ಸಮಾಲೋಚಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು