7:46 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಗೆ ಭವ್ಯ ಸ್ವಾಗತ: ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಮೇಯರ್ 

19/07/2022, 18:37

ಮಂಗಳೂರು(reporterkarnataka.com): 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. 

ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಬೆಳಗ್ಗೆ 44ನೇ ಚೆಸ್ ಒಲಿಂಪಿಯಾಡ್‍ನ ರಿಲೇ ಜ್ಯೋತಿಯನ್ನು ಸ್ವಾಗತಿಸಿ ಮಾತನಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಯ ಆಗಮನವಾಗುತ್ತಿದೆ, ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಹಾಗೂ 75 ಜಿಲ್ಲಾ ಕೇಂದ್ರಗಳಲ್ಲಿ ಒಲಂಪಿಯಾಡ್ ರಿಲೇ ಜ್ಯೋತಿ ಸಂಚರಿಸಲಿದೆ. ರಾಜ್ಯದ ಬೆಂಗಳೂರು ಮತ್ತು ಮಂಗಳೂರಿಗೆ ಈ ಸುವರ್ಣಾವಕಾಶ ದೊರೆತಿರುವುದು ಸೌಭಾಗ್ಯವಾಗಿದೆ. ಇಂದು ಬೆಳಗಿದ ಕ್ರೀಡಾ ಜ್ಯೋತಿ ದೇಶದಾದ್ಯಂತ ಇನ್ನಷ್ಟು ಪ್ರತಿಭೆಗಳ ಬದುಕಿಗೆ ಬೆಳಕು ನೀಡಲಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು. 

ಭಾರತದಲ್ಲೇ ಜನ್ಮ ತಾಳಿದ ಈ ಕ್ರೀಡೆಗೆ ಕೇಂದ್ರ ಸರ್ಕಾರ ಅದ್ದೂರಿ ಬೆಂಬಲ ನೀಡುತ್ತಿರುವುದು ಸಂತಸದ ಸಂಗತಿ. ದೇಶದಲ್ಲಿ ಮೊದಲ ಬಾರಿಗೆ ಚೆಸ್ ಒಲಂಪಿಯಾಡ್ ಟಾರ್ಚ್ ರಿಲೇ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.


ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಇದಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಇನ್ನಷ್ಟು ಪ್ರತಿಭಾವಂತ ಯುವ ಜನರು ಈ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಕರ್ಣಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಮಾತನಾಡಿ, ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆಗಳಲ್ಲಿ ಚದುರಂಗದಾಟವು ಒಂದು. ಅದು ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತಿದೆ. ಸರ್ಕಾರದ ಇದಕ್ಕೆ ನೀಡುತ್ತಿರುವ ಪ್ರೋತ್ಸಾಹದಿಂದಾಗಿ ಚೆಸ್ ದ್ರುವತಾರೆಗಳು ಬೆಳಕಿಗೆ ಬರಲಿದ್ದಾರೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಯೆನೆಪೋಯ ಉಪ ಕುಲಪತಿ ಡಾ.ಎಂ. ವಿಜಯ ಕುಮಾರ್, ಗ್ರಾಂಡ್ ಮಾಸ್ಟರ್‍ಗಳಾದ ತೇಜ ಕುಮಾರ್, ಜಿ.ಎ ಸ್ಟಾನಿ, ಚೆಸ್ ಫೆಡರೇಷನ್ ಅಧ್ಯಕ್ಷ ರಮೆಶ್ ಕೋಟೆ, ಎನ್.ಎಸ್.ಎಸ್ ಪ್ರೋಗ್ರಾಂ ಕೋ-ಆರ್ಡಿನೇಟರ್ ಡಾ.ಅಶ್ವಿನಿ ಶೆಟ್ಟಿ, ನೆಹರೂ ಯುವ ಕೇಂದ್ರದ ಅಧಿಕಾರಿಗಳಾದ ವಿಷ್ಣುಮೂರ್ತಿ,  ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್, ಭಾರತೀಯ ಚೆಸ್ ಫೆಡರೇಷನ್‍ನ ಜಿಲ್ಲಾಧ್ಯಕ್ಷ ರಾಜಗೋಪಾಲ್ ಶೆಣೈ, ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ರಘುವೀರ್ ಸೂಟರ್ ಪೇಟೆ ಸೇರಿದಂತೆ, ಎನ್.ಸಿ.ಸಿ, ಮಂಗಳೂರು ವಿಶ್ವ ವಿದ್ಯಾನಿಲಯ ಹಾಗೂ ಯೇನಾಪೋಯ ವಿಶ್ವ ವಿದ್ಯಾ ನಿಲಯದ ಎನ್.ಎಸ್. ಎಸ್ ಸ್ವಯಂ ಸೇವಕರು , ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು