1:37 PM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಗೆ ಭವ್ಯ ಸ್ವಾಗತ: ಐತಿಹಾಸಿಕ ಕ್ಷಣ ಎಂದು ಬಣ್ಣಿಸಿದ ಮೇಯರ್ 

19/07/2022, 18:37

ಮಂಗಳೂರು(reporterkarnataka.com): 44ನೇ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿ ಜಿಲ್ಲೆಗೆ ಆಗಮಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದು ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಅಭಿಪ್ರಾಯಪಟ್ಟರು. 

ಅವರು ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಮಂಗಳವಾರ ಬೆಳಗ್ಗೆ 44ನೇ ಚೆಸ್ ಒಲಿಂಪಿಯಾಡ್‍ನ ರಿಲೇ ಜ್ಯೋತಿಯನ್ನು ಸ್ವಾಗತಿಸಿ ಮಾತನಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದಾದ್ಯಂತ ಚೆಸ್ ಒಲಿಂಪಿಯಾಡ್ ರಿಲೇ ಜ್ಯೋತಿಯ ಆಗಮನವಾಗುತ್ತಿದೆ, ದೇಶದ ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಹಾಗೂ 75 ಜಿಲ್ಲಾ ಕೇಂದ್ರಗಳಲ್ಲಿ ಒಲಂಪಿಯಾಡ್ ರಿಲೇ ಜ್ಯೋತಿ ಸಂಚರಿಸಲಿದೆ. ರಾಜ್ಯದ ಬೆಂಗಳೂರು ಮತ್ತು ಮಂಗಳೂರಿಗೆ ಈ ಸುವರ್ಣಾವಕಾಶ ದೊರೆತಿರುವುದು ಸೌಭಾಗ್ಯವಾಗಿದೆ. ಇಂದು ಬೆಳಗಿದ ಕ್ರೀಡಾ ಜ್ಯೋತಿ ದೇಶದಾದ್ಯಂತ ಇನ್ನಷ್ಟು ಪ್ರತಿಭೆಗಳ ಬದುಕಿಗೆ ಬೆಳಕು ನೀಡಲಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು. 

ಭಾರತದಲ್ಲೇ ಜನ್ಮ ತಾಳಿದ ಈ ಕ್ರೀಡೆಗೆ ಕೇಂದ್ರ ಸರ್ಕಾರ ಅದ್ದೂರಿ ಬೆಂಬಲ ನೀಡುತ್ತಿರುವುದು ಸಂತಸದ ಸಂಗತಿ. ದೇಶದಲ್ಲಿ ಮೊದಲ ಬಾರಿಗೆ ಚೆಸ್ ಒಲಂಪಿಯಾಡ್ ಟಾರ್ಚ್ ರಿಲೇ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.


ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ಇದಕ್ಕೆ ಚಾಲನೆ ನೀಡಿದ್ದಾರೆ. ಈ ಮೂಲಕ ಇನ್ನಷ್ಟು ಪ್ರತಿಭಾವಂತ ಯುವ ಜನರು ಈ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಶುಭ ಹಾರೈಸಿದರು.

ಕರ್ಣಾಟಕ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಮಾತನಾಡಿ, ವಿಶ್ವಕ್ಕೆ ಭಾರತ ನೀಡಿದ ಅಮೂಲ್ಯ ಕೊಡುಗೆಗಳಲ್ಲಿ ಚದುರಂಗದಾಟವು ಒಂದು. ಅದು ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಬೆಳವಣಿಗೆ ಕಾಣುತ್ತಿದೆ. ಸರ್ಕಾರದ ಇದಕ್ಕೆ ನೀಡುತ್ತಿರುವ ಪ್ರೋತ್ಸಾಹದಿಂದಾಗಿ ಚೆಸ್ ದ್ರುವತಾರೆಗಳು ಬೆಳಕಿಗೆ ಬರಲಿದ್ದಾರೆ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಯೆನೆಪೋಯ ಉಪ ಕುಲಪತಿ ಡಾ.ಎಂ. ವಿಜಯ ಕುಮಾರ್, ಗ್ರಾಂಡ್ ಮಾಸ್ಟರ್‍ಗಳಾದ ತೇಜ ಕುಮಾರ್, ಜಿ.ಎ ಸ್ಟಾನಿ, ಚೆಸ್ ಫೆಡರೇಷನ್ ಅಧ್ಯಕ್ಷ ರಮೆಶ್ ಕೋಟೆ, ಎನ್.ಎಸ್.ಎಸ್ ಪ್ರೋಗ್ರಾಂ ಕೋ-ಆರ್ಡಿನೇಟರ್ ಡಾ.ಅಶ್ವಿನಿ ಶೆಟ್ಟಿ, ನೆಹರೂ ಯುವ ಕೇಂದ್ರದ ಅಧಿಕಾರಿಗಳಾದ ವಿಷ್ಣುಮೂರ್ತಿ,  ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಪ್ರಾದೇಶಿಕ ನಿರ್ದೇಶಕ ಎಂ.ಎನ್. ನಟರಾಜ್, ಭಾರತೀಯ ಚೆಸ್ ಫೆಡರೇಷನ್‍ನ ಜಿಲ್ಲಾಧ್ಯಕ್ಷ ರಾಜಗೋಪಾಲ್ ಶೆಣೈ, ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ರಘುವೀರ್ ಸೂಟರ್ ಪೇಟೆ ಸೇರಿದಂತೆ, ಎನ್.ಸಿ.ಸಿ, ಮಂಗಳೂರು ವಿಶ್ವ ವಿದ್ಯಾನಿಲಯ ಹಾಗೂ ಯೇನಾಪೋಯ ವಿಶ್ವ ವಿದ್ಯಾ ನಿಲಯದ ಎನ್.ಎಸ್. ಎಸ್ ಸ್ವಯಂ ಸೇವಕರು , ಕ್ರೀಡಾಪಟುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು