2:12 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಮತ್ತೆ ತಲೆ ಎತ್ತಿದ ಗ್ಯಾಂಗ್ ವಾರ್; ಮಾರಕಾಸ್ತ್ರದಿಂದ ದಾಳಿ; ಓರ್ವ ಗಂಭೀರ

30/11/2021, 13:55

ಮಂಗಳೂರು(reporterkarnataka.com): ಕಡಲನಗರಿಯಲ್ಲಿ ಮತ್ತೆ ಗ್ಯಾಂಗ್ ವಾರ್ ತಲೆ ಎತ್ತಿದೆ. ಹಳೆಯ ಕೊಲೆಯೊಂದರ ವೈಷಮ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ರೌಡಿಗಳ ಗ್ಯಾಂಗ್ ವಾರ್ ನಡೆದಿದೆ. ಓರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾರಕಾಸ್ತ್ರಗಳಿಂದ ತಂಡವೊಂದು ದಾಳಿ ನಡೆಸಿದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ದಾಳಿಗೊಳಗಾದ ಯುವಕನನ್ನು ಶ್ರವಣ್ ಎಂದು ಗುರುತಿಸಲಾಗಿದೆ.

ಅಳಕೆ ಗ್ಯಾಂಗ್ ತಂಡದ 8 ಮಂದಿ ಶ್ರವಣ್‍ ಮೇಲೆ ಮಾರಕಾಯುಧದಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಪರಿಸ್ಥಿತಿ ಚಿಂತಾಜನಕವಾಗಿದೆ‌ ಎನ್ನಲಾಗಿದೆ.

2020ರಲ್ಲಿ ಬರ್ಕೆಯಲ್ಲಿ ನಡೆದ ಇಂದ್ರಜಿತ್ ಕೊಲೆ ಪ್ರಕರಣ ನಡೆದಿತ್ತು. ಗಾಯಗೊಂಡ ಶ್ರವಣ್ ಇಂದ್ರಜಿತ್ ಕೊಲೆ ಪ್ರಕರಣದ ಇಬ್ಬರು ಆರೋಪಿಗಳ ಸಹೋದರ. ಇಂದ್ರಜಿತ್ ಕೊಲೆಗೆ ಪ್ರತೀಕಾರವಾಗಿ ಈ ಕೊಲೆಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು