12:40 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ: ಖಾಕಿ ಜತೆ ಸಂತ ಅಲೋಶಿಯಸ್ ವಿದ್ಯಾರ್ಥಿಗಳ ಸಾಥ್

13/12/2023, 17:14

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣ ಭಟ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ ನಗರದ ಆಯಕಟ್ಟಿ ಸ್ಥಳಗಳಲ್ಲಿ ಬುಧವಾರ ನಡೆಯಿತು.


ಅಪಘಾತದಿಂದ ಜೀವ ರಕ್ಷಣೆ, ಸಂಚಾರಿ ನಿಯಮ ಪಾಲನೆ ಕುರಿತು ವಿನೂತನ ಪ್ರಯತ್ನ ಇದಾಗಿತ್ತು. ನಗರದ ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೆಲ್, ಅಂಬೇಡ್ಕರ್ ಸರ್ಕಲ್ ಮುಂತಾದ ಕಡೆಗಳಲ್ಲಿ ವಿದ್ಯಾರ್ಥಿಗಳು ಪ್ಲೇ ಕಾರ್ಡ್ ಹಿಡಿದು ಪ್ರದರ್ಶನ ನಡೆಸಿದರು.
ಮೈ ಶೋ, ಸ್ಕಿಟ್ ಮೂಲಕ ಮಧ್ಯಾಹ್ನ 2.30ರಿಂದ 4.00 ಗಂಟೆಯ ಬ್ಯುಸಿ ಸಮಯದಲ್ಲಿ ಟ್ರಾಫಿಕ್ ನಿರ್ವಹಣೆ ಜತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು. ಜನರ ಜೀವದ ಮಹತ್ವ ಬಗ್ಗೆ ಸಣ್ಣ ಸ್ಕಿಟ್ ಅನ್ನು ಪ್ರದರ್ಶಿಸುವ ಮೂಲಕ ಪ್ರಯಾಣಿಕರಿಗೆ ಮನದಟ್ಟು ಮಾಡುವ ಪ್ರಯತ್ನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು