1:54 AM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ: ಖಾಕಿ ಜತೆ ಸಂತ ಅಲೋಶಿಯಸ್ ವಿದ್ಯಾರ್ಥಿಗಳ ಸಾಥ್

13/12/2023, 17:14

ಮಂಗಳೂರು(reporterkarnataka.com): ನಗರದ ಕದ್ರಿ ಠಾಣಾ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣ ಭಟ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಟ್ರಾಫಿಕ್ ಮತ್ತು ಡ್ರಗ್ಸ್ ಜಾಗೃತಿ ಅಭಿಯಾನ ನಗರದ ಆಯಕಟ್ಟಿ ಸ್ಥಳಗಳಲ್ಲಿ ಬುಧವಾರ ನಡೆಯಿತು.


ಅಪಘಾತದಿಂದ ಜೀವ ರಕ್ಷಣೆ, ಸಂಚಾರಿ ನಿಯಮ ಪಾಲನೆ ಕುರಿತು ವಿನೂತನ ಪ್ರಯತ್ನ ಇದಾಗಿತ್ತು. ನಗರದ ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೆಲ್, ಅಂಬೇಡ್ಕರ್ ಸರ್ಕಲ್ ಮುಂತಾದ ಕಡೆಗಳಲ್ಲಿ ವಿದ್ಯಾರ್ಥಿಗಳು ಪ್ಲೇ ಕಾರ್ಡ್ ಹಿಡಿದು ಪ್ರದರ್ಶನ ನಡೆಸಿದರು.
ಮೈ ಶೋ, ಸ್ಕಿಟ್ ಮೂಲಕ ಮಧ್ಯಾಹ್ನ 2.30ರಿಂದ 4.00 ಗಂಟೆಯ ಬ್ಯುಸಿ ಸಮಯದಲ್ಲಿ ಟ್ರಾಫಿಕ್ ನಿರ್ವಹಣೆ ಜತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಯಿತು. ಜನರ ಜೀವದ ಮಹತ್ವ ಬಗ್ಗೆ ಸಣ್ಣ ಸ್ಕಿಟ್ ಅನ್ನು ಪ್ರದರ್ಶಿಸುವ ಮೂಲಕ ಪ್ರಯಾಣಿಕರಿಗೆ ಮನದಟ್ಟು ಮಾಡುವ ಪ್ರಯತ್ನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು