6:37 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಏಪ್ರಿಲ್ 8, 9ರಂದು ‘ಮಂಗಳೂರು ಲಿಟ್ ಫೆಸ್ಟ್’

07/04/2022, 10:30

ಮಂಗಳೂರು(reporterkarnataka.com): ನಾಲ್ಕನೇ ಆವೃತ್ತಿಯ ಮಂಗಳೂರು ಲಿಟ್ ಫೆಸ್ಟ್ ಏ.8, 9ರಂದು ನಗರದ  ಓಶಿಯನ್ ಪರ್ಲ್ ಹೋಟೆಲ್‌ನಲ್ಲಿ ಆಯೋಜಿಸಲಾಗಿದೆ.

ಪ್ರಾಚೀನ ಭಾರತೀಯ ಶಾಂತಿ, ಸಮೃದ್ಧತೆ ಹಾಗೂ ಸಮಷ್ಟಿ ಹಿತದ ಪರಿಕಲ್ಪನೆಯನ್ನು ಪ್ರದರ್ಶಿಸುವ ಉದ್ದೇಶದಲ್ಲಿ ನಡೆಯುವ ಈ ಲಿಟ್ ಫೆಸ್ಟ್‌ನಲ್ಲಿ, ಅನೇಕ ಸಮಕಾಲೀನ ವಿಚಾರಗಳೂ ಚರ್ಚೆಗೊಳಗಾಗಲಿವೆ. ಚರ್ಚಾ ಕಾರ್ಯಕ್ರಮದಲ್ಲಿ ಶತಾವಧಾನಿ ಡಾ.ಆರ್. ಗಣೇಶ್ ಪಾಲ್ಗೊಳ್ಳಲಿರುವರು. ರಷ್ಯಾ-ಯೂಕ್ರೇನ್ ಬಿಕ್ಕಟ್ಟು ಭಾರತೀಯ ದೃಷ್ಟಿಕೋನದ ಬಗ್ಗೆ ಡಾ.ದತ್ತೇಶ್ ಪ್ರಭು ಪಾರುಲ್ಕರ್, ಸುಮಿತ್ ಪಾಂಡೆ, ನಯನಾ ಆನಂದ್ ವಿಮರ್ಶಿಸುವರು. ಭಾಷೆ ಮತ್ತು ತಂತ್ರಜ್ಞಾನದ ಬಗ್ಗೆ ಕೆ.ಪಿ.ರಾವ್ ಹಾಗೂ ಬೇಳೂರು ಸುದರ್ಶನ ಮಾತನಾಡುವರು, ಕಾಶ್ಮೀರದ ಕಥೆಗಳು ಎಂಬ ಗೋಷ್ಠಿಯನ್ನು ಲೇಖಕಿ ಸಹನ ವಿಜಯ್ ಕುಮಾರ್ ಹಾಗೂ ಅಜೇಯ್ ಭಾರತಿ ನಿರ್ವಹಿಸುವರು. ಬೋಸ್ ಅವರ ಇನ್ನೂ ಹೇಳದ ಕಥೆ ಎಂಬ ವಿಚಾರವಾಗಿ ಅನುಜ್ ಧರ್, ಚಂದ್ರಚೂಡ್ ಬೋಸ್, ನವನೀತ್ ಕೃಷ್ಣ ಚರ್ಚಿಸಲಿದ್ದಾರೆ.

ಎರಡನೇ ದಿನದ ಕಾರ್ಯಕ್ರಮದಲ್ಲಿ ರೋಹಿತ್ ಚಕ್ರತೀರ್ಥ, ಅರವಿಂದ ಚೊಕ್ಕಾಡಿ ಮತ್ತು ಅಶ್ವಿನಿ ದೇಸಾಯಿ ಪಠ್ಯ ವಿಮರ್ಶೆ ಕೈಗೊಳ್ಳುವರು. ಕನ್ನಡಿಗರ ಕಣ್ಣಲ್ಲಿ ಸಾಂಸ್ಕೃತಿಕ ಭಾರತ ಎಂಬ ವಿಚಾರವಾಗಿ ಡಾ.ಜೆ.ಬಿ.ಹರೀಶ, ಡಾ.ನಿರಂಜನ ವಾನಳ್ಳಿ ಮತ್ತು ಜಿ.ಆರ್.ಸಂತೋಷ್ ಮಾತನಾಡುವರು, ಕಶ್ಮೀರ್ ಫೈಲ್ಸ್ ರೀಲ್ ಮತ್ತು ರಿಯಲ್’ ಎಂಬ ವಿಚಾರವಾಗಿ ಕಲಾವಿದ ಪ್ರಕಾಶ್ ಬೆಳವಾಡಿ, ನಾಗರಿಕತೆಯ ನಿರೂಪಣೆ ಎಂಬ ವಿಚಾರವಾಗಿ ನಿತಿನ್ ಶ್ರೀಧರ್, ಸಾಯಿಸ್ವರೂಪ ಅಯ್ಯರ್, ಗಣತ್ರ ಸಮಾಲೋಚಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು