5:59 PM Tuesday8 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಡಲ ತೀರದಲ್ಲಿ‌ ನಡೆಯುವ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ: ಮಲ್ಪೆಯಲ್ಲಿ ಸಾರ್ವಜನಿಕರ‌ ಹಕ್ಕೊತ್ತಾಯ

23/10/2022, 14:07

ಮಲ್ಪೆ(reporterkarnataka.com):ಮಲ್ಪೆ ಕಡಲ ತೀರದ ಪಡುಕೆರೆಯಿಂದ ಮಟ್ಟುವರೆಗೆ ಸ್ಥಳೀಯ ಮೀನುಗಾರ ನಿವಾಸಿಗಳು ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಪ್ರವಾಸಿಗರಿಗೆ ನಿರ್ಭಂದ ಹೇರಿ 8 ಕಡೆಗಳಲ್ಲಿ ಬ್ಯಾನರ್ ಅಳವಡಿಸಿದ್ದಾರೆ. ಈ ವಿಚಾರದ ಕುರಿತಾಗಿ ಮಲ್ಪೆ ಪೋಲಿಸರು ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಸ್ಥಳೀಯ ಮೀನುಗಾರ ಮಹಿಳೆ ಜಯಲಕ್ಷ್ಮೀ ಕೋಟ್ಯಾನ್ ಅವರು, ಈ ಭಾಗದಲ್ಲಿ ರಾತ್ರಿ 1 ಗಂಟೆಯವರೆಗೂ ಪ್ರವಾಸಿಗರು ತಿರುಗುತ್ತಾರೆ. ಪ್ರವಾಸಿಗರು ಕೈಯಲ್ಲಿ ಮದ್ಯದ ಬಾಟಲಿ ಹಿಡಿದು ಓಡಾಡುತ್ತಿದ್ದು, ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಹಿಳೆಯರು, ಮಕ್ಕಳಿಗೆ ಭೀತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಜಾನೆ ಕೆಲಸಕ್ಕೆ ಹೋಗುವಾಗಲೂ ಸೇತುವೆ ಬಳಿ ಅಪರಿಚಿತರು ನಿಂತುಕೊಂಡಿರುತ್ತಾರೆ. ರಾತ್ರಿ ಭಜನಾ ಮಂದಿರ ಗೇಟ್ ತೆಗೆದು ಒಳಗೆ ಪ್ರವೇಶಿಸುತ್ತಾರೆ, ನಮ್ಮದೇ ಊರಿನಲ್ಲಿ ನಮಗೆ ಓಡಾಡಲು ಕಷ್ಟವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಲ್ಪೆ ಠಾಣೆಯ ಪಿಎಸ್.ಐ ಶಕ್ತಿವೇಲು ಮಾತನಾಡಿ ಗ್ರಾಮಸ್ಥರ ಸಮಸ್ಯೆ ಆಲಿಸಲು ಬಂದಿದ್ದೇವೆ, ನಿಮ್ಮಿಂದ ಸಹಕಾರ ಅಗತ್ಯವಾಗಿದೆ. ರಾತ್ರಿ ಹೊಯ್ಸಳ ಗಸ್ತು ತಿರುಗುತ್ತದೆ. ಯಾವುದೇ ಅಕ್ರಮ ಹಾಗೂ ಅನಗತ್ಯವಾಗಿ ಓಡಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುತ್ತೇವೆ ಎಂದರು.
ಸಭೆಯಲ್ಲಿ ಸ್ಥಳೀಯ ಮುಖಂಡರಾದ ರಾಮ ಕಾಂಚನ್, ರಮೇಶ್ ಮೆಂಡನ್, ಪ್ರಕಾಶ್ ಮಲ್ಪೆ ಹಾಗು ಪೋಲಿಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು