1:57 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಕಡಲನಗರಿ ಕುಡ್ಲಕ್ಕೆ ಪ್ರಧಾನಿ: ಸಿದ್ಧಗೊಳ್ಳುತ್ತಿದೆ 2 ಲಕ್ಷ ಮಂದಿ ಆಸೀನರಾಗಬಲ್ಲ ಬೃಹತ್ ಪೆಂಡಾಲ್

28/08/2022, 12:49

ಅಶೋಕ್ ಕಲ್ಲಡ್ಕ ಮಂಗಳೂರು

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಪ್ರಧಾನಿ ನರೇಂದ್ರ ಮೋದಿ ಅವರು ಸೆ.2ರಂದು ಮಂಗಳೂರಿಗೆ ಆಗಮಿಸುವ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ರಸ್ತೆಗಳ ತೇಪೆ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಮತ್ತೊಂದೆಡೆ
ಕೂಳೂರು ಸಮೀಪದ ಗೋಲ್ಡ್ ಫಿಂಚ್ ಸಿಟಿ ಮೈದಾನಲ್ಲಿ 2 ಲಕ್ಷ ಜನರು ಕುಳಿತು ನೋಡಬಹುದಾದ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ.

ರಸ್ತೆ ತೇಪೆ ಕಾರ್ಯಕ್ಕೆ ಮಂಗಳೂರು ಮಹಾನಗರಪಾಲಿಕೆ ಅನುದಾನ ಬಿಡುಗಡೆ ಮಾಡಿದೆ. ರಸ್ತೆ ದುರಸ್ತಿ ಕಾರ್ಯ ಭರದಲ್ಲಿ ನಡೆಯುತ್ತಿದೆ. ಅದೇ ರೀತಿ ಪಿಡಬ್ಲ್ಯುಡಿಗೆ ಸೇರಿದ ರಸ್ತೆಗಳ ದುರಸ್ತಿ ಕಾಮಗಾರಿ ನಡೆಯುತ್ತಿದೆ.

ಈ ನಡುವೆ ಎನ್ಎಂಪಿಟಿಯಲ್ಲಿ ಲೋಕಾರ್ಪಣೆಗೊಳ್ಳಲಿರುವ ವಿವಿಧ ಯೋಜನೆಗಳ ಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಎನ್ಎಂಪಿಟಿ
ಕಾರ್ಯಕ್ರಮದ ನಂತರ ಪ್ರಧಾನಿ ಗೋಲ್ಡ್ ಫಿಂಚ್ ಸಿಟಿ ಮೈದಾನಲ್ಲಿ ನಡೆಯಲಿರುವ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅದಕ್ಕಾಗಿ ಇಲ್ಲಿ ಬೃಹತ್ ಪೆಂಡಾಲ್ ನಿರ್ಮಾಣ ಕಾರ್ಯ ನಡೆಯುತ್ತಿದೆ. 2 ಲಕ್ಷ ಜನರು ಆಸೀನರಾಗಲು ಬೇಕಾಗುವ ಪೆಂಡಲ್ ನಿರ್ಮಾಣ ಕಾಮಗಾರಿ ಕೆಲಸ ನಡೆಯುತ್ತಿದೆ. ಇದರೊಂದಿಗೆ ಬೃಹತ್ ವೇದಿಕೆ ನಿರ್ಮಾಣವೂ ಆಗುತ್ತಿದೆ.80 ಅಡಿ ಅಗಲ, 60 ಅಡಿ ಉದ್ದ, 20 ಅಡಿ ಎತ್ತರದ ವೇದಿಕೆಯನ್ನು ಸಿದ್ಧಗೊಳ್ಳುತ್ತಿದೆ. ಸಭೆಯಲ್ಲಿ ಪಾಲ್ಗೊಂಡವರಿಗೆ ನೀರಿನ, ಮಜ್ಜಿಗೆಯ ವ್ಯವಸ್ಥೆ ಮಾಡಲಾಗಿದೆ.ವಾಹನಗಳ ಪಾರ್ಕಿಂಗ್ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು