4:31 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ:  ಕರಾವಳಿ ಬಿಜೆಪಿ ಪಾಳಯದಲ್ಲಿ ಗರಿಗೆದರಿದ ಸಂಭ್ರಮ

02/09/2022, 13:44

ಮಂಗಳೂರು(reporterkarnataka.com): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಎಲ್ಲೆಡೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಕೇಂದ್ರ ಸಚಿವರಾದ ಪ್ರಲ್ಲಾದ ಜೋಷಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ಬಂದರು, ಹಡಗು ಮತ್ತು ಜಲಸಾರಿಗೆ ಹಾಗೂ ಆಯುಷ್ ಸಚಿವ ಸರ್ಬಾನಂದ್ ಸೋನೋವಾಲ್, ಇಂಧನ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ, ಬಂದರು, ಹಡಗು ಮತ್ತು ಜಲಸಾರಿಗೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್  ಹಾಗೂ ಶಂತನು ಠಾಕೂರ್, ರಾಜ್ಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಸ್. ಅಂಗಾರ, ಮೇಯರ್ ಪ್ರೇಮಾನಂದ ಶೆಟ್ಟಿ ಮುಂತಾದವರು ಸ್ವಾಗತಿಸಿದರು.ತುಳುನಾಡಿನ ಸಂಪ್ರದಾಯದಂತೆ ಸ್ವಾಗತಿಸಿದರು.

ಮೋದಿ ಅವರು ಬಂದರು, ಒಳನಾಡು ಜಲಸಾರಿಗೆಗೆ ಸಂಬಂಧಿಸಿದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸ ನೆರವೇರಿಸುವರು.

ನಗರದ  ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಮಧ್ಯಾಹ್ನ 1.30ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ  3,800  ಕೋಟಿ ರೂ.ಗಳ ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಮತ್ತು ಶಿಲಾನ್ಯಾಸ ನಡೆಯಲಿದೆ.

ಪ್ರಧಾನಿ ಲೋಕಾರ್ಪಣೆ ಮಾಡುವ ಯೋಜನೆಗಳಲ್ಲಿ, ಕಂಟೇನರ್ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14 ರ ಯಾಂತ್ರೀಕರಣ ( 281 ಕೋಟಿ ರೂ.), ಬಿಎಸ್ VI ಉನ್ನತೀಕರಣ ಯೋಜನೆ (1829 ಕೋಟಿ ರೂ.), ಸಮುದ್ರ ನೀರಿನ ನಿರ್ಲವಣೀಕರಣ ಘಟಕ (

677 ಕೋಟಿ ರೂ.) ಗಳು ಸೇರಿವೆ. 

ಇದೇ ಸಂದರ್ಭದಲ್ಲಿ ನರೇಂದ್ರ ಮೋದಿ, ಎನ್ಎಂಪಿಟಿಯಲ್ಲಿ ಸಮಗ್ರ ಎಲ್ಪಿಜಿ ಹಾಗೂ ಬೃಹತ್ ಪಿಓಎಲ್ ಸೌಲಭ್ಯ  (ಅಂದಾಜು ವೆಚ್ಚ ರೂ. 500 ಕೋಟಿ), ಶೇಖರಣಾ ಟ್ಯಾಂಕ್ಗಳು ಹಾಗೂ ಖಾದ್ಯ ತೈಲ ಸಂಸ್ಕರಣಾಗಾರ ನಿರ್ಮಾಣ ( 100 ಕೋಟಿ ರೂ.), ಬಿಟುಮಿನ್ ಶೇಖರಣಾ ಟ್ಯಾಂಕ್ ಘಟಕಗಳ ನಿರ್ಮಾಣ  100 ಕೋಟಿ ರೂ.) ಹಾಗೂ ಬಿಟುಮಿನ್, ಖಾದ್ಯ ತೈಲ ಶೇಖರಣಾ ಟ್ಯಾಂಕ್ಗಳು ಹಾಗೂ ಸಂಬಂಧಿತ ಸೌಲಭ್ಯಗಳ ನಿರ್ಮಾಣ (ರೂ. 100 ಕೋಟಿ) ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.

ಜೊತೆಗೆ, ಕುಳಾಯಿಯಲ್ಲಿ ಇಪಿಸಿ ಮಾದರಿಯಲ್ಲಿ ಮೀನುಗಾರಿಕಾ ಬಂದರು ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಮಾಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು