12:47 AM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಕಡಲನಗರಿ ಮಂಗಳೂರಿನಲ್ಲಿ ಕ್ರಿಸ್ಮಸ್ ಸಂಭ್ರಮ; ದೇವರ ನಿಜವಾದ ಭಾಷೆಯೇ ಪ್ರೀತಿ: ಡಾ. ಬಿಷಪ್ ಪೀಟರ್ ಪಾವ್ಲ್

25/12/2024, 10:45

ಮಂಗಳೂರು(reporterkarnataka.com):ದೇವರು ಕೋಪ, ದ್ವೇಷದ ಮಾತುಗಳನ್ನು ಎಲ್ಲಿಯೂ ಆಡಿಲ್ಲ. ಅವರು ಪ್ರೀತಿಯ ಮಾತುಗಳನ್ನೇ ಹೇಳುತ್ತಾ ಸಾಗಿದರು.ದೇವರು ಪ್ರೀತಿಯ ಭಾಷೆಯಲ್ಲಿ ಮಾತನಾಡುತ್ತಾರೆ. ಪ್ರೀತಿಗೆ ಹೆಚ್ಚು ಮಹತ್ವ ಕೊಡುವ ಮೂಲಕ ನಾವು ಸಮಾಜದಲ್ಲಿರುವ ನೆರೆಹೊರೆಯವರ ಜತೆಗೆ ಪ್ರೀತಿಯನ್ನು ಹಂಚುವ ಕೆಲಸ ಮಾಡಬೇಕು ಎಂದು ಹಬ್ಬದ ಮೂಲಕ ಯೇಸು ಸಾರುತ್ತಾರೆ ಎಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಬಿಷಪ್ ಡಾ.ಪೀಟರ್ ಪಾವ್ಲ್ ಸಲ್ಡಾನ ಹೇಳಿದರು.
ಅವರು ನಗರದ ರೊಸಾರಿಯೋ ಕೆಥೆಡ್ರಲ್‍ನಲ್ಲಿ ಕ್ರಿಸ್ಮಸ್ ಹಬ್ಬದ ವಿಶೇಷ ಬಲಿಪೂಜೆಯ ನೇತೃತ್ವ ವಹಿಸಿ ಆಶೀರ್ವಚನ ನೀಡುತ್ತಾ, ಕ್ರೈಸ್ತ ಪವಿತ್ರಗ್ರಂಥಗಳಲ್ಲಿ ದೇವರು ಕೋಪ, ದ್ವೇಷದ ಮಾತುಗಳನ್ನು ಎಲ್ಲಿಯೂ ಆಡಿಲ್ಲ. ಅವರು ಪ್ರೀತಿಯ ಮಾತುಗಳನ್ನೇ ಹೇಳುತ್ತಾ ಸಾಗಿದರು. ಗೋದಲಿಯಲ್ಲಿ ಶ್ರೀಸಾಮಾನ್ಯರಂತೆ ಹುಟ್ಟಿದ ಯೇಸು ಜಗತ್ತಿನಲ್ಲಿ ತನ್ನ ಸರಳತೆಯ ಮೂಲಕ ಪ್ರೀತಿ, ಶಾಂತಿ, ನೆಮ್ಮದಿ ಜತೆಗೆ ಕ್ಷಮಿಸುವ ಗುಣವನ್ನು ಮೈಗೂಡಿಸಿಕೊಳ್ಳಲು ಸೂಚಿಸಿದರು ಎಂದರು.
ಈ ಸಂದರ್ಭ ರೊಸಾರಿಯೋ ಕೆಥೆಡ್ರಲ್‍ನ ಪ್ರಧಾನ ಧರ್ಮಗುರು ಫಾ. ಆಲ್ಪ್ರೆಡ್ ಪಿಂಟೋ ಸೇರಿದಂತೆ ನಾನಾ ಧರ್ಮಗುರುಗಳು ಭಾಗವಹಿಸಿದ್ದರು. ಇದೇ ರೀತಿಯಲ್ಲಿ ಮಂಗಳೂರಿನ ಮಿಲಾಗ್ರಿಸ್ ಚರ್ಚ್‍ನಲ್ಲಿ ಫಾ. ಬೊನವೆಂಚರ್ ನಜರೇತ್, ಉರ್ವ ಲೇಡಿಹಿಲ್ ಚರ್ಚ್‍ನಲ್ಲಿ ಫಾ. ಬೆಂಜಮಿನ್ ಪಿಂಟೋ, ಅಶೋಕನಗರದ ಸಂತ ಡೊಮಿನಿಕ್ ಚರ್ಚ್‍ನಲ್ಲಿ ಫಾ. ಡೇನಿಯಲ್ ಸಂಪತ್ ವೇಗಸ್, ಕೂಳೂರು ಚರ್ಚ್‍ನಲ್ಲಿ ಫಾ. ವಿಜಯ ವಿಕ್ಟರ್ ಲೋಬೋ ಅವರು ಕ್ರಿಸ್ಮಸ್ ಸಂಭ್ರಮದ ಬಲಿಪೂಜೆಯ ನೇತೃತ್ವ ವಹಿಸಿ ಸಂದೇಶವನ್ನು ನೀಡಿದರು. ಇದೇ ರೀತಿಯಲ್ಲಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಚರ್ಚ್‍ಗಳಲ್ಲಿ ಸಂಜೆ ಹೊತ್ತು ಕ್ರಿಸ್ಮಸ್ ಕ್ಯಾರೆಲ್ಸ್, ಕ್ರಿಸ್ಮಸ್ ಬಲಿಪೂಜೆ ಹಾಗೂ ಕ್ರಿಸ್ಮಸ್ ಕಾರ್ಯಕ್ರಮಗಳು ಸಾಗಿತು. ಕ್ರೈಸ್ತರು ಹಬ್ಬದ ಸಂಭ್ರಮದಲ್ಲಿ ಪರಸ್ಪರ ಶುಭಾಶಯ ಕೋರುವ ಸಿಹಿತಿನಸುಗಳು( ಕುಸ್ವಾರ್) ಕೇಕ್‍ಗಳನ್ನು ನೀಡುವ ದೃಶ್ಯಗಳು ಎಲ್ಲೆಡೆ ಕಾಣಿಸಿಕೊಂಡಿತು.


ಡಿ.25ರಂದು ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಎಲ್ಲ ಚರ್ಚ್‍ಗಳಲ್ಲಿ ವಿಶೇಷ ಪೂಜೆಗಳು ನಡೆದರೆ ಸಂಜೆ ಕ್ರಿಸ್ಮಸ್ ಕಾರ್ಯಕ್ರಮಗಳು ಸಾಗಲಿದೆ. ಬಿಷಪ್ ಅವರು ಮಂಗಳೂರಿನ ನಂತೂರಿನ ಭಗಿನಿಯರ ಕಾನ್ವೆಂಟ್‍ನಲ್ಲಿ ಹಬ್ಬದ ವಿಶೇಷ ಬಲಿಪೂಜೆ ಹಾಗೂ ಸಂದೇಶವನ್ನು ನೀಡಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು