9:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಭಾರೀ ವರ್ಷಧಾರೆ: ಬಜಾಲ್ ನಲ್ಲಿ ಹೋಟೆಲ್, ವಿದ್ಯುತ್ ತಂತಿ ಮೇಲೆ ಬಿದ್ದ ಮರ; ಮಳೆಯಲ್ಲೂ ಲೈನ್ ಮ್ಯಾನ್ ದುರಸ್ತಿ ಕಾರ್ಯ

24/07/2023, 20:25

ಮಂಗಳೂರು(reporterkarnataka.com): ಕಳೆದ ಎರಡು ದಿನಗಳಿಂದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ನಗರದಲ್ಲೂ ತಗ್ಗು ಪ್ರದೇಶ ಜಲಾವೃತವಾಗಿದೆ. ಬಜಾಲ್ ನಲ್ಲಿ ಹೊಟೇಲ್ ವೊಂದರ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ತಂತಿ ಕಡಿದು ಹೋಗಿದೆ. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ದುರಸ್ತಿ ಕಾರ್ಯ ನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.


ಗಾಳಿ ಮಳೆಗೆ ಕಳೆದ ಎರಡು ದಿನಗಳಿಂದ ಹಲವು ಮರಗಳು ಧರಾಶಾಹಿಯಾಗಿವೆ. ಲಾಲ್ ಬಾಗ್ ಬಳಿ ಫ್ಲೆಕ್ಸ್ ಮುರಿದು ಬಿದ್ದಿದೆ. ಲೇಡಿಹಿಲ್ ನಲ್ಲಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿದೆ. ದ್ವಿಚಕ್ರ ವಾಹನವೊಂದರ ಸವಾರರು ಪವಾಡಸದೃಶ ಪಾರಾಗಿದ್ದಾರೆ. ನಗರದ ಹೊರವಲಯದ ಬಜಾಲ್ ಸಮೀಪ ಗಾಳಿ ಮಳೆಗೆ ಹೋಟೆಲ್ ಮೇಲೆ ಸೋಮವಾರ ಬೆಳಗ್ಗೆ ಮರ ಬಿದ್ದು ವಿದ್ಯುತ್ ಕಂಬಗಳ ತಂತಿಗೆ ಹಾನಿಯಾಗಿದ್ದು, ಸುತ್ತ ಮುತ್ತ ವಿದ್ಯುತ್ ಸಂಪರ್ಕ ಬೆಳಗ್ಗಿನಿಂದ ಕಡಿತಗೊಂಡಿತು. ಮಳೆಯನ್ನು ಲೆಕ್ಕಿಸದೆ ಮೆಸ್ಕಾಂ
ಲೈನ್ ಮ್ಯಾನ್ ಕಂಬ ಹತ್ತಿ ದುರಸ್ತಿ ಕಾರ್ಯ ನಡೆಸಿದ್ದಾರೆ. ಅಗ್ನಿಶಾಮಕ ಸಿಬಂದಿ ಕೂಡ ಸ್ಥಳಕ್ಕಾಗಮಿಸಿ ಹೋಟೆಲ್ ಮೇಲೆ ಬಿದ್ದ ಮರವನ್ನು ತುಂಡರಿಸಿ ಕಾರ್ಯಾಚರಣೆ ನಡೆಸಿ. ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು