4:13 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ:  ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ

26/07/2022, 12:24

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ.

ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಮುದ್ರದಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ದೊರೆಯುವಂತೆ ಮತ್ತು ಯಾವುದೇ ಅವಘಢ ಸಂಭವಿಸದಂತೆ ಸಮುದ್ರರಾಜ ಹಾಗೂ ತಮ್ಮ ಇಷ್ಟದೇವರಲ್ಲಿ ಮೊರೆ ಹೋಗಿದ್ದಾರೆ.

ಮೀನು ಮೊಟ್ಟೆ ಇಡುವ ಸಮಯದಲ್ಲಿ ಮೀನುಗಾರಿಕೆಗೆ ಕರಾವಳಿಯಲ್ಲಿ ನಿಷೇಧವಿರುತ್ತದೆ. ಕಡಲಿನಲ್ಲಿ ಮತ್ಸ್ಯ ಸಂಪತ್ತಿನ ವೃದ್ಧಿಯ ಆಶಯ ಈ ನಿಷೇಧದ ಉದ್ದೇಶವಾಗಿದೆ. ಮೀನುಗಾರಿಕೆ ಸ್ಥಗಿತ ಸಮಯದಲ್ಲಿ ಯಾಂತ್ರೀಕೃತ ದೋಣಿಯ ಮೂಲಕ ಆಳ ಸಮುದ್ರ ಮೀನುಗಾರಿಕೆ ನಡೆಸುವುದಕ್ಕೆ ನಿಷೇಧವಿರುತ್ತದೆ. ಆದರೆ ನಾಡದೋಣಿ ಮೂಲಕ ಸಮುದ್ರ ಮೀನುಗಾರಿಕೆಗೆ ಅವಕಾಶವಿರುತ್ತದೆ.

ಮೀನುಗಾರಿಕೆ ನಿಷೇಧ ಸಮಯದಲ್ಲಿ ಸಾಮಾನ್ಯವಾಗಿ ಮೀನಿನ ರೇಟ್ ಜಾಸ್ತಿಯಾಗುತ್ತದೆ. ಕೆಜಿಗೆ 200 ರೂಪಾಯಿಗೆ ಸಿಗುವ ಬಂಗುಡೆ ಮೀನು ಕೆಜಿಗೆ 400ರಿಂದ 450 ರೂಪಾಯಿ ಆಗುತ್ತದೆ. ಉಳಿದ ಮೀನಿನ ಮಾರುಕಟ್ಟೆ ಮೌಲ್ಯ ಕೂಡ ಡಬಲ್ ಆಗುತ್ತದೆ. ಆಳ ಸಮುದ್ರ ಮೀನುಗಾರಿಕೆ ನಿಷೇಧ ಸಮಯದಲ್ಲಿ ನದಿ, ಹೊಳೆ, ತೋಡು, ಕೆರೆ ಮೀನುಗಾರಿಕೆಗೆ ಬಹಳ ಬೇಡಿಕೆ ಇರುತ್ತದೆ. ಹೊಳೆ ಮೀನು ಪ್ರಿಯರ ಸಮುದಾಯವೇ ಕರಾವಳಿಯಲ್ಲಿದೆ. 

ಸಮುದ್ರದಲ್ಲಿ ಆಳ ಮೀನುಗಾರಿಕೆಯ ಯಾಂತ್ರೀಕೃತ

ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಮೀನುಗಾರಿಕೆ ನಿಷೇಧ ಇರುವುದರಿಂದ ಅವರೆಲ್ಲ

ರಜೆಯಲ್ಲಿ ಊರಿಗೆ ತೆರಳಿದ್ದಾರೆ. ಆದರೆ ಮೀನುಗಾರಿಕೆ ಶುರುವಾಗುವ ದಿನ ಹತ್ತಿರ ಬರಲಾರಂಭಿಸಿರುವುದರಿಂದ ಅವರು ಮತ್ತೆ

ಮಂಗಳೂರಿನತ್ತ ಮುಖ ಮಾಡಿದ್ದಾರೆ.

ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದೆ. ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು