8:54 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ:  ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ

26/07/2022, 12:24

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ.

ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಮುದ್ರದಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ದೊರೆಯುವಂತೆ ಮತ್ತು ಯಾವುದೇ ಅವಘಢ ಸಂಭವಿಸದಂತೆ ಸಮುದ್ರರಾಜ ಹಾಗೂ ತಮ್ಮ ಇಷ್ಟದೇವರಲ್ಲಿ ಮೊರೆ ಹೋಗಿದ್ದಾರೆ.

ಮೀನು ಮೊಟ್ಟೆ ಇಡುವ ಸಮಯದಲ್ಲಿ ಮೀನುಗಾರಿಕೆಗೆ ಕರಾವಳಿಯಲ್ಲಿ ನಿಷೇಧವಿರುತ್ತದೆ. ಕಡಲಿನಲ್ಲಿ ಮತ್ಸ್ಯ ಸಂಪತ್ತಿನ ವೃದ್ಧಿಯ ಆಶಯ ಈ ನಿಷೇಧದ ಉದ್ದೇಶವಾಗಿದೆ. ಮೀನುಗಾರಿಕೆ ಸ್ಥಗಿತ ಸಮಯದಲ್ಲಿ ಯಾಂತ್ರೀಕೃತ ದೋಣಿಯ ಮೂಲಕ ಆಳ ಸಮುದ್ರ ಮೀನುಗಾರಿಕೆ ನಡೆಸುವುದಕ್ಕೆ ನಿಷೇಧವಿರುತ್ತದೆ. ಆದರೆ ನಾಡದೋಣಿ ಮೂಲಕ ಸಮುದ್ರ ಮೀನುಗಾರಿಕೆಗೆ ಅವಕಾಶವಿರುತ್ತದೆ.

ಮೀನುಗಾರಿಕೆ ನಿಷೇಧ ಸಮಯದಲ್ಲಿ ಸಾಮಾನ್ಯವಾಗಿ ಮೀನಿನ ರೇಟ್ ಜಾಸ್ತಿಯಾಗುತ್ತದೆ. ಕೆಜಿಗೆ 200 ರೂಪಾಯಿಗೆ ಸಿಗುವ ಬಂಗುಡೆ ಮೀನು ಕೆಜಿಗೆ 400ರಿಂದ 450 ರೂಪಾಯಿ ಆಗುತ್ತದೆ. ಉಳಿದ ಮೀನಿನ ಮಾರುಕಟ್ಟೆ ಮೌಲ್ಯ ಕೂಡ ಡಬಲ್ ಆಗುತ್ತದೆ. ಆಳ ಸಮುದ್ರ ಮೀನುಗಾರಿಕೆ ನಿಷೇಧ ಸಮಯದಲ್ಲಿ ನದಿ, ಹೊಳೆ, ತೋಡು, ಕೆರೆ ಮೀನುಗಾರಿಕೆಗೆ ಬಹಳ ಬೇಡಿಕೆ ಇರುತ್ತದೆ. ಹೊಳೆ ಮೀನು ಪ್ರಿಯರ ಸಮುದಾಯವೇ ಕರಾವಳಿಯಲ್ಲಿದೆ. 

ಸಮುದ್ರದಲ್ಲಿ ಆಳ ಮೀನುಗಾರಿಕೆಯ ಯಾಂತ್ರೀಕೃತ

ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಮೀನುಗಾರಿಕೆ ನಿಷೇಧ ಇರುವುದರಿಂದ ಅವರೆಲ್ಲ

ರಜೆಯಲ್ಲಿ ಊರಿಗೆ ತೆರಳಿದ್ದಾರೆ. ಆದರೆ ಮೀನುಗಾರಿಕೆ ಶುರುವಾಗುವ ದಿನ ಹತ್ತಿರ ಬರಲಾರಂಭಿಸಿರುವುದರಿಂದ ಅವರು ಮತ್ತೆ

ಮಂಗಳೂರಿನತ್ತ ಮುಖ ಮಾಡಿದ್ದಾರೆ.

ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದೆ. ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು