6:24 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಕೃಷ್ಣಲೋಕ ಸೃಷ್ಟಿ: ಕದ್ರಿಯಲ್ಲಿ ಮೇಳೈಸಿದ ಕೇಶವ, ಅಚ್ಯುತ, ಮಾಧವ!

06/09/2023, 23:16

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಅಲ್ಲಿ ಕೃಷ್ಣಲೋಕವೇ ಸೃಷ್ಟಿಯಾಗಿತ್ತು. ಎಲ್ಲಿ ನೋಡಿದರಲ್ಲಿ ಕೃಷ್ಣ ಪರಮಾತ್ಮನ ದರುಶನ. ಹಾಗೆಂತ ಕೇಶವ, ಅಚ್ಯುತ, ಮಾಧವರ ವಿಗ್ರಹ- ಮೂರ್ತಿಗಳ ದರ್ಶನವಲ್ಲ. ಓಡಾಡುವ ಪರಮಾತ್ಮರೇ ಅಲ್ಲಿ ಕಾಣಸಿಗುತ್ತಿದ್ದರು.


ಕೆಲವು ಕೃಷ್ಣರು ಅಮ್ಮನ ಕಂಕುಳಲ್ಲಿ ಕಂಡು ಬಂದರೆ, ಇನ್ನು ಕೆಲವರು ಅಪ್ಪನ ತೋಳಲ್ಲಿ, ಅಜ್ಜನ ಹೆಗಲಲ್ಲಿ ಜೋತು ಬಿದ್ದಿದ್ದರು. ಐಸ್ ಕ್ರೀಮ್ ತಿನ್ನುವ ಕೃಷ್ಣರು, ಕ್ಯಾಡ್ ಬರಿ ಮೆಲ್ಲುವ ಕೃಷ್ಣರು, ಕುರ್ಕುರೆ ಸವಿಯುವ ಕೃಷ್ಣರೂ ಅಲ್ಲಿದ್ದರು.


ಇದೆಲ್ಲ ಕಂಡು ಬಂದದ್ದು ನಗರದ ಕದ್ರಿ ಮಂಜುನಾಥ ದೇವಳದ ಆವರಣದಲ್ಲಿ. ಕಲ್ಕೂರ ಪ್ರತಿಷ್ಠಾನ ಪ್ರತಿವರ್ಷ ನಡೆಸುವಂತೆ ಈ ಬಾರಿಯೂ ರಾಷ್ಟ್ರೀಯ ಕೃಷ್ಣವೇಷ ಸ್ಪರ್ಧೆ ಏರ್ಪಡಿಸಿತ್ತು. ಬಾಲಕೃಷ್ಣ, ತುಂಟ ಕೃಷ್ಣ, ಕಿಶೋರ ಕೃಷ್ಣ, ಯಕ್ಷಕೃಷ್ಣ,ಯಶೋಧಕೃಷ್ಣ ಸೇರಿದಂತೆ ಹಲವು ವಿಭಾಗಗಳಲ್ಲಿ ಸ್ಪರ್ಧೆ ಏರ್ಪಟ್ಟಿತ್ತು. ಪುಟಾಣಿಗಳಿಗಿಂತಲೂ ಅವರ ಹೆತ್ತವರು ಬಹಳ ಖುಷಿಯಿಂದ ತಮ್ಮ ಮಗ-ಮಗಳನ್ನು ಜತೆಗೆ ಕರೆದುಕೊಂಡು ಬಂದಿದ್ದರು. ಕೆಲವರು ಹೊರಗಿನಿಂದಲೇ ತಮ್ಮ ಮಕ್ಕಳಿಗೆ ಕೃಷ್ಣವೇಷ ಹಾಕಿಸಿಕೊಂಡು ಬಂದರೆ ಇನ್ನೂ ಕೆಲವರು ದೇವಳದಲ್ಲೇ ಪ್ರಸಾದನ ಮಾಡಿಸುವುದು ಕಂಡು ಬಂತು. ಹೆಚ್ಚಿನ ಮಕ್ಕಳು ಉತ್ಸುಕತೆಯಿಂದ ತಮ್ಮನ್ನು ಕೃಷ್ಣನಾಗಿ ಪರಿವರ್ತಿಸಿಕೊಂಡರೆ, ಕೆಲವು ಮಕ್ಕಳು ವೇಷ ಬೇಡವೆಂದು ಅಳುವುದು ಕೂಡ ಕಂಡು ಬಂತು. ಅಂತಹ ಮಕ್ಕಳಿಗೆ ಪೋಷಕರು ಐಸ್ ಕ್ರೀಮ್, ಕ್ಯಾಡ್ ಬರಿ ಮುಂತಾದ ಆಮಿಷೆಗಳನ್ನೊಡಿ ಮಕ್ಕಳ ಮುಖಕ್ಕೆ ಬಣ್ಣ ಹಚ್ಚುವಂತೆ ಮಾಡುವಲ್ಲಿ ಯಶಸ್ವಿಯಾಗುತ್ತಿದ್ದರು. ತಂದೆ- ತಾಯಿಯಂದಿರಿಗೆ ಗುರುತು ಸಿಗದಷ್ಟು ಕೃಷ್ಣವೇಷ ಹಾಕಿದ ಮಕ್ಕಳು ಬದಲಾಗಿದ್ದರು. ಒಟ್ಟಿನಲ್ಲಿ ಕದ್ರಿ ಕೃಷ್ಣಲೋಕವಾಗಿ ಪರಿವರ್ತನೆಗೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು