10:14 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

15/01/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ತೆರಳಿದ್ದಾರೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆನೆಯನ್ನು ಕಂಡ ಅಭಿಷೇಕ್ ಕಂದಕಕ್ಕೆ ಜಿಗಿದಿದ್ದರಿಂದ ಕಾಲು ಹಾಗೂ ಮೂಗಿನ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಯುನೈಟೆಡ್ ಮೀಡಿಯಾ ಎಂಬ ಯುಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು. ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣಕ್ಕೆ ಮಂಗಳವಾರ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ಆರೀಫ್ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಯಿತು. ಈ ಸಂದರ್ಭದಲ್ಲಿ ಆರೀಫ್, ನವೀನ್,
ಸಂಜಯ್ ಗೌಡ ಕೊಟ್ಟಿಗೆಹಾರ, ಗಿರೀಶ್, ಸುಂದರೇಶ, ಭಕ್ತಿ ಶ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು