10:21 AM Monday11 - May 2026
ಬ್ರೇಕಿಂಗ್ ನ್ಯೂಸ್
ಸುವೇಂದು ಪಿಎ ಚಂದ್ರನಾಥ್ ರಾಥ್ ಹತ್ಯೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್: ಸಿಐಡಿ ತನಿಖೆ ತೈಲ ಬಳಕೆಯಲ್ಲಿ ಮಿತಿಯಿರಲಿ, ವರ್ಷದ ಮಟ್ಟಿಗೆ ಚಿನ್ನ ಖರೀದಿಸಬೇಡಿ::ಪ್ರಧಾನಿ ಮೋದಿ ಮಹತ್ವದ ಕರೆ ತಿರುಚಿ ಪೂರ್ವ ಕ್ಷೇತ್ರಕ್ಕೆ ತಮಿಳುನಾಡು ಸಿಎಂ ವಿಜಯ್ ರಾಜೀನಾಮೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಇನ್ನಿಲ್ಲ: ಅನಾರೋಗ್ಯದಿಂದ ನಿಧನ ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..!

ಇತ್ತೀಚಿನ ಸುದ್ದಿ

ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

15/01/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ತೆರಳಿದ್ದಾರೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆನೆಯನ್ನು ಕಂಡ ಅಭಿಷೇಕ್ ಕಂದಕಕ್ಕೆ ಜಿಗಿದಿದ್ದರಿಂದ ಕಾಲು ಹಾಗೂ ಮೂಗಿನ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಯುನೈಟೆಡ್ ಮೀಡಿಯಾ ಎಂಬ ಯುಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು. ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣಕ್ಕೆ ಮಂಗಳವಾರ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ಆರೀಫ್ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಯಿತು. ಈ ಸಂದರ್ಭದಲ್ಲಿ ಆರೀಫ್, ನವೀನ್,
ಸಂಜಯ್ ಗೌಡ ಕೊಟ್ಟಿಗೆಹಾರ, ಗಿರೀಶ್, ಸುಂದರೇಶ, ಭಕ್ತಿ ಶ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು