1:15 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾಡಾನೆಯ ಚಿತ್ರೀಕರಣ ಮಾಡಲು ಹೋದ ಯೂಟ್ಯೂಬರ್ ಮೇಲೆ ಸಲಗ ದಾಳಿ: ಕೂದಲೆಳೆ ಅಂತರದಲ್ಲಿ ಪಾರು

15/01/2025, 12:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬ ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಜಿಲ್ಲೆಯ ಕಟ್ಟ ಕಡೆಯ ಗ್ರಾಮ ವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ತೆರಳಿದ್ದಾರೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾರೆ. ಆನೆಯನ್ನು ಕಂಡ ಅಭಿಷೇಕ್ ಕಂದಕಕ್ಕೆ ಜಿಗಿದಿದ್ದರಿಂದ ಕಾಲು ಹಾಗೂ ಮೂಗಿನ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಯುನೈಟೆಡ್ ಮೀಡಿಯಾ ಎಂಬ ಯುಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದು. ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣಕ್ಕೆ ಮಂಗಳವಾರ ತೆರಳಿದ್ದರು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸಮಾಜಸೇವಕ ಆರೀಫ್ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕಳಿಸಲಾಯಿತು. ಈ ಸಂದರ್ಭದಲ್ಲಿ ಆರೀಫ್, ನವೀನ್,
ಸಂಜಯ್ ಗೌಡ ಕೊಟ್ಟಿಗೆಹಾರ, ಗಿರೀಶ್, ಸುಂದರೇಶ, ಭಕ್ತಿ ಶ ಮೊದಲಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು