11:34 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು

03/12/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ನಿನ್ನೆ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲಿಯೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡು ಬಂದಿದೆ.
ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ.
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು