11:42 PM Thursday5 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು

03/12/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ನಿನ್ನೆ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲಿಯೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡು ಬಂದಿದೆ.
ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ.
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು