8:38 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಸಲಗ ಬಲಿ: ಅರವಳಿಗೆ ಚುಚ್ಚುಮದ್ದು ನೀಡಿದ ಬಳಿಕ ಸಾವು

03/12/2023, 11:26

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಸಾಗಿಸಲು ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ನಿನ್ನೆ ರಾತ್ರಿ ಮೇಕನಗದ್ದೆ ಗ್ರಾಮದ ಸಮೀಪ ಕಾಡಾನೆ ಕಾಣಿಸಿಕೊಂಡಿದ್ದು, ಅರವಳಿಗೆ ಚುಚ್ಚುಮದ್ದು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.
ಅರವಳಿಕೆ ಚುಚ್ಚುಮದ್ದು ಹಾಕಿದ ನಂತರ ಆನೆಯ ಜಾಡು ಹಿಡಿದು ಹೋದಾಗ ಸ್ವಲ್ಪ ದೂರದಲ್ಲಿಯೇ ಕಾಡಾನೆ ಮೃತಪಟ್ಟು ಬಿದ್ದಿದ್ದು ಕಂಡು ಬಂದಿದೆ.
ಶನಿವಾರ ರಾತ್ರಿ ಸುಮಾರು 11-30 ರ ವೇಳೆಗೆ ಈ ಘಟನೆ ನಡೆದಿದೆ. ಇತ್ತೀಚೆಗೆ ಆನೆ ಕಾರ್ಯಪಡೆ ಸಿಬ್ಬಂದಿ ಕಾರ್ತಿಕ್ ಗೌಡ ಅವರನ್ನು ಕಾಡಾನೆಯೊಂದು ತುಳಿದು ಸಾಯಿಸಿದ್ದ ದೊಡ್ಡಗೊಳ್ಳ ಎಂಬ ಸ್ಥಳದ ಸಮೀಪದಲ್ಲಿಯೇ ಕಾಡಾನೆ ಸತ್ತು ಬಿದ್ದಿದೆ ಎಂದು ತಿಳಿದುಬಂದಿದೆ.
ಸಾವನ್ನಪ್ಪಿರುವ ಆನೆ ಒಂಟಿಗೊಂಬಿನ ಆನೆಯಾಗಿದೆ. ಇದು ಅನೇಕ ವರ್ಷಗಳಿಂದ ಈ ಭಾಗದಲ್ಲಿ ಸಂಚರಿಸುತ್ತಿತ್ತು ಎಂದು ತಿಳಿಬಂದಿದೆ.
ಆನೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಅರಣ್ಯ ಇಲಾಖೆಯಿಂದ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು