7:38 PM Sunday7 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ಕಡೇಶ್ವಾಲ್ಯ-ಅಜಿಲಮೊಗರು ಸೌಹಾರ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣ: ಮಾಜಿ ಸಚಿವ ರಮಾನಾಥ ರೈ

07/06/2026, 19:24

ಬಂಟ್ವಾಳ(reporterkarnataka.com): ಕಳೆದ 7 ವರ್ಷಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿ.ಸಿ.ರೋಡಿನಲ್ಲೇ ಶಿಲಾನ್ಯಾಸ ನೆರವೇರಿಸಿದ್ದ 20 ಕೋಟಿ ವೆಚ್ಚದ ಕಡೇಶ್ವಾಲ್ಯ-ಅಜಿಲಮೊಗರು ಸಂಪರ್ಕಿಸುವ ‘ಸೌಹಾರ್ದ ಸೇತುವೆ’ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಲೋಕಾರ್ಪಣೆಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಕಡೇಶ್ವಾಲ್ಯ-ಅಜಿಲಮೊಗರು ಸೌಹಾರ್ದ ಸೇತುವೆ ಕಾಮಗಾರಿಯನ್ನು ಬುಧವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇಲ್ಲಿನ ಕಡೇಶ್ವಾಲ್ಯ ಮತ್ತು ಮಣಿನಾಲ್ಕೂರು ಗ್ರಾಮಗಳನ್ನು ಸಂಪರ್ಕಿಸುದರ ಜೊತೆಗೆ ಪ್ರಸಿದ್ಧ ಕಡೇಶ್ವಾಲ್ಯ ಲಕ್ಷ್ಮೀ ನರಸಿಂಹ ದೇವಾಲಯ ಮತ್ತು ಅಜಿಲ ಮೊಗರು ಬಾಬಾ ಫಕ್ರುದ್ದೀನ್ ದರ್ಗಾ ಪರಸ್ಪರ ಸಂಬಂಧ ಬೆಸೆಯುವ ಮೂಲಕ ‘ಸೌಹಾರ್ದ ಸೇತುವೆ’ಯಾಗಿ ಮೂಡಿ ಬಂದಿದೆ. ಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟನೆಗೆ ಶೀಘ್ರವೇ ದಿನ ನಿಗದಿಗೊಳಿಸುವುದಾಗಿ ಹೇಳಿದ್ದಾರೆ ಎಂದರು.
ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಡಳಿತಾವಧಿಯಲ್ಲಿ ಬಂಟ್ವಾಳ ಕ್ಷೇತ್ರದಲ್ಲಿ 5 ಸಾವಿರ ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಶಿಲಾನ್ಯಾಸ ಮತ್ತು ಉದ್ಘಾಟನೆಗೊಂಡಿದ್ದು, ಆ ಬಳಿಕ ನಾನು ಪರಾಭವಗೊಂಡು ಸಕಕಾರವೂ ಬೇರೆ ಬಂತು. ಇದೀಗ ಮತ್ತೆ ಕಾಂಗ್ರೆಸ್ ಆಡಳಿತಾವಧಿಯಲ್ಲಿ ಬಾಕಿ ಉಳಿದಿರುವ ಪಂಜೆ ಮಂಗೇಶರಾಯ ಭವನ ಮತ್ತು ಕ್ರೀಡಾಂಗಣ ಮತ್ತಿತರ ಕನಸಿನ ಯೋಜನೆಗಳನ್ನು ಪೂರ್ಣಗೊಳಿಸಲು ಶ್ರಮಿಸುವುದಾಗಿ ಅವರು ತಿಳಿಸಿದರು.

ಬೀಜ ಮತ್ತು ಸಾವಯವ ಪ್ರಮಾಣೀಕರಣ ನಿಗಮ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ, ಪದ್ಮಶೇಖರ್ ಜೈನ್, ಅಬ್ಬಾಸ್ ಆಲಿ, ಸಂಪತ್ ಕುಮಾರ್ ಶೆಟ್ಟಿ, ಶಿವಪ್ಪ ಪೂಜಾರಿ ಹಟದಡ್ಕ, ಕಾಂಚಲಾಕ್ಷಿ, ಸಂಜೀವ ಪೂಜಾರಿ, ಪೂವಪ್ಪ ಪೂಜಾರಿ, ಈಶ್ವರ ಪೂಜಾರಿ, ಆದಂ ಕುಂಞ, ಸುರೇಶ್ ಜೋರಾ, ಚಿದಾನಂದ ಕಡೇಶ್ವಾಲ್ಯ, ಹರಿಶ್ಚಂದ್ರ ಕಡೇಶ್ವಾಲ್ಯ, ಯೂಸುಫ್ ಕರಂದಾಡಿ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು