11:43 AM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು!

07/06/2024, 13:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬಜಾಜ್ ಫಿನ್ಸರ್ ನಿಂದ ಮಾತನಾಡುತ್ತಿರುವುದಾಗಿ ನಂಬಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ನಂಬಿಸಿದ್ದಾನೆ. ವಂಚಕನ ಮಾತನ್ನ ನಂಬಿದ ಅಶೋಕ್ ನೊಂದಣಿ ಹಾಗೂ ದಾಖಲೆಗಳ ಶುಲ್ಕ ಎಂದು ಕಾರಣ ನೀಡಿ ಹಂತಹಂತವಾಗಿ 1.32 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ಉಂಡೆನಾಮ ಹಾಕಿದ್ದಾನೆ. ವಂಚನೆಗೆ ಒಳಗಾದ ಅಶೋಕ್ ರವರು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವಂಚಕನ ವಿರುದ್ದ ದೂರು ದಾಖಲಿಸಿದ್ದಾರೆ. ನಂಜನಗೂಡು ತಾಲೂಕಿನಾದ್ಯಂತ ದಿನನಿತ್ಯ ಮೂರರಿಂದ ನಾಲ್ಕು ಆನ್ಲೈನ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ನಡೆಯುತ್ತಿವೆ. ವಂಚಕರ ಮಾತಿಗೆ ಮರುಳಾಗಿ ದುಡಿದು ಕೂಡಿಟ್ಟ ಹಣವನ್ನು ಸಾಕಷ್ಟು ಮಂದಿ ಕಳೆದುಕೊಳ್ಳುತ್ತಿದ್ದಾರೆ. ತಾಲೂಕಿನ ಜನತೆಗೆ ಪೊಲೀಸರು ಜಾಗೃತಿ ಮೂಡಿಸುವುದರ ಜೊತೆಗೆ ಖದೀಮರ ಬಂಧನಕ್ಕೆ ನಂಜನಗೂಡು ಪೊಲೀಸರು ಜಾಲ ಬೀಸುತ್ತಾರಾ..? ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು