8:57 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು!

07/06/2024, 13:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬಜಾಜ್ ಫಿನ್ಸರ್ ನಿಂದ ಮಾತನಾಡುತ್ತಿರುವುದಾಗಿ ನಂಬಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ನಂಬಿಸಿದ್ದಾನೆ. ವಂಚಕನ ಮಾತನ್ನ ನಂಬಿದ ಅಶೋಕ್ ನೊಂದಣಿ ಹಾಗೂ ದಾಖಲೆಗಳ ಶುಲ್ಕ ಎಂದು ಕಾರಣ ನೀಡಿ ಹಂತಹಂತವಾಗಿ 1.32 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ಉಂಡೆನಾಮ ಹಾಕಿದ್ದಾನೆ. ವಂಚನೆಗೆ ಒಳಗಾದ ಅಶೋಕ್ ರವರು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವಂಚಕನ ವಿರುದ್ದ ದೂರು ದಾಖಲಿಸಿದ್ದಾರೆ. ನಂಜನಗೂಡು ತಾಲೂಕಿನಾದ್ಯಂತ ದಿನನಿತ್ಯ ಮೂರರಿಂದ ನಾಲ್ಕು ಆನ್ಲೈನ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ನಡೆಯುತ್ತಿವೆ. ವಂಚಕರ ಮಾತಿಗೆ ಮರುಳಾಗಿ ದುಡಿದು ಕೂಡಿಟ್ಟ ಹಣವನ್ನು ಸಾಕಷ್ಟು ಮಂದಿ ಕಳೆದುಕೊಳ್ಳುತ್ತಿದ್ದಾರೆ. ತಾಲೂಕಿನ ಜನತೆಗೆ ಪೊಲೀಸರು ಜಾಗೃತಿ ಮೂಡಿಸುವುದರ ಜೊತೆಗೆ ಖದೀಮರ ಬಂಧನಕ್ಕೆ ನಂಜನಗೂಡು ಪೊಲೀಸರು ಜಾಲ ಬೀಸುತ್ತಾರಾ..? ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು