4:07 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು!

07/06/2024, 13:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬಜಾಜ್ ಫಿನ್ಸರ್ ನಿಂದ ಮಾತನಾಡುತ್ತಿರುವುದಾಗಿ ನಂಬಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ನಂಬಿಸಿದ್ದಾನೆ. ವಂಚಕನ ಮಾತನ್ನ ನಂಬಿದ ಅಶೋಕ್ ನೊಂದಣಿ ಹಾಗೂ ದಾಖಲೆಗಳ ಶುಲ್ಕ ಎಂದು ಕಾರಣ ನೀಡಿ ಹಂತಹಂತವಾಗಿ 1.32 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ಉಂಡೆನಾಮ ಹಾಕಿದ್ದಾನೆ. ವಂಚನೆಗೆ ಒಳಗಾದ ಅಶೋಕ್ ರವರು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವಂಚಕನ ವಿರುದ್ದ ದೂರು ದಾಖಲಿಸಿದ್ದಾರೆ. ನಂಜನಗೂಡು ತಾಲೂಕಿನಾದ್ಯಂತ ದಿನನಿತ್ಯ ಮೂರರಿಂದ ನಾಲ್ಕು ಆನ್ಲೈನ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ನಡೆಯುತ್ತಿವೆ. ವಂಚಕರ ಮಾತಿಗೆ ಮರುಳಾಗಿ ದುಡಿದು ಕೂಡಿಟ್ಟ ಹಣವನ್ನು ಸಾಕಷ್ಟು ಮಂದಿ ಕಳೆದುಕೊಳ್ಳುತ್ತಿದ್ದಾರೆ. ತಾಲೂಕಿನ ಜನತೆಗೆ ಪೊಲೀಸರು ಜಾಗೃತಿ ಮೂಡಿಸುವುದರ ಜೊತೆಗೆ ಖದೀಮರ ಬಂಧನಕ್ಕೆ ನಂಜನಗೂಡು ಪೊಲೀಸರು ಜಾಲ ಬೀಸುತ್ತಾರಾ..? ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು