4:49 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ; 1.32 ಲಕ್ಷಕ್ಕೆ ಉಂಡೆನಾಮ!: ಆನ್ಲೈನ್ ವಂಚಕರ ಜಾಲಕ್ಕೆ ಬಲೆ ಬೀಸುತ್ತಾರಾ ನಂಜನಗೂಡು ಪೊಲೀಸರು!

07/06/2024, 13:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ 1.32 ಲಕ್ಷ ಹಣಕ್ಕೆ ಉಂಡೆನಾಮ ಹಾಕಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.

ಅಶೋಕ್ ಎಂಬುವರೇ ಹಣ ಕಳೆದುಕೊಂಡವರು. ಮೊಬೈಲ್ ಗೆ ಅನಾಮಧೇಯ ವ್ಯಕ್ತಿಯೊಬ್ಬ ಕರೆ ಮಾಡಿ ಬಜಾಜ್ ಫಿನ್ಸರ್ ನಿಂದ ಮಾತನಾಡುತ್ತಿರುವುದಾಗಿ ನಂಬಿಸಿ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ನಂಬಿಸಿದ್ದಾನೆ. ವಂಚಕನ ಮಾತನ್ನ ನಂಬಿದ ಅಶೋಕ್ ನೊಂದಣಿ ಹಾಗೂ ದಾಖಲೆಗಳ ಶುಲ್ಕ ಎಂದು ಕಾರಣ ನೀಡಿ ಹಂತಹಂತವಾಗಿ 1.32 ಲಕ್ಷ ಹಣ ವರ್ಗಾವಣೆ ಮಾಡಿಸಿಕೊಂಡು ಉಂಡೆನಾಮ ಹಾಕಿದ್ದಾನೆ. ವಂಚನೆಗೆ ಒಳಗಾದ ಅಶೋಕ್ ರವರು ನಂಜನಗೂಡು ಟೌನ್ ಪೊಲೀಸ್ ಠಾಣೆಯಲ್ಲಿ ಅನಾಮಧೇಯ ವಂಚಕನ ವಿರುದ್ದ ದೂರು ದಾಖಲಿಸಿದ್ದಾರೆ. ನಂಜನಗೂಡು ತಾಲೂಕಿನಾದ್ಯಂತ ದಿನನಿತ್ಯ ಮೂರರಿಂದ ನಾಲ್ಕು ಆನ್ಲೈನ್ ವಂಚನೆ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ನಡೆಯುತ್ತಿವೆ. ವಂಚಕರ ಮಾತಿಗೆ ಮರುಳಾಗಿ ದುಡಿದು ಕೂಡಿಟ್ಟ ಹಣವನ್ನು ಸಾಕಷ್ಟು ಮಂದಿ ಕಳೆದುಕೊಳ್ಳುತ್ತಿದ್ದಾರೆ. ತಾಲೂಕಿನ ಜನತೆಗೆ ಪೊಲೀಸರು ಜಾಗೃತಿ ಮೂಡಿಸುವುದರ ಜೊತೆಗೆ ಖದೀಮರ ಬಂಧನಕ್ಕೆ ನಂಜನಗೂಡು ಪೊಲೀಸರು ಜಾಲ ಬೀಸುತ್ತಾರಾ..? ಎಂಬುದನ್ನು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು