7:23 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಡೂರು: ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ; ಎಸ್ಪಿ ಕಚೇರಿ ಎದುರು ಕಣ್ಣೀರಿಟ್ಟ ಹೆತ್ತಬ್ಬೆ

17/07/2023, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ನ್ಯಾಯಕ್ಕಾಗಿ ಹೆತ್ತವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ.


ರುಕ್ಮಿಣಿ (31) ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ನಿನ್ನೆ ಮಧ್ಯಾಹ್ನ 12 ಗಂಟೆಗೆ ರುಕ್ಮಿಣಿ ಅವರು ಸಾವನ್ನಪ್ಪಿದ್ದರು.
ಮಂಡ್ಯ ಜಿಲ್ಲೆಯ ರಾಗಿಮುದ್ದನಹಳ್ಳಿ ಮೂಲದ ರುಕ್ಮಿಣಿ ಅವರು ಮದುವೆಯಾಗಿ ಕಡೂರಿಗೆ ಬಂದಿದ್ದರು. ಮಂಡ್ಯದಿಂದ ಬಂದ ರುಕ್ಮಿಣಿ ಕುಟುಂಬಸ್ಥರು ಆಗಮಿಸಿದ್ದಾರೆ. ಮಗಳದ್ದು ಆತ್ಮಹತ್ಯೆಯಲ್ಲ. ಆತ್ಮಹತ್ಯೆಯೆಂದು ಪ್ರಕರಣ ಮರೆಮಾಚಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೂರು ದಾಖಲಿಸಿಕೊಳ್ಳಲು ಕಡೂರು ಪೊಲೀಸರ ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ಗಂಡ ಕಣ್ಣನ್ ವಿರುದ್ಧ ಕೊಲೆ ಆರೋಪವನ್ನು ರುಕ್ಮಿಣಿ ಕುಟುಂಬಸ್ಥರು ಮಾಡಿದ್ದಾರೆ. ಮದುವೆ ಆದಾಗಿನಿಂದಲೂ ಮಗಳಿಗೆ ಅತ್ತೆ-ಮಾವ, ಗಂಡ ಕಿರುಕುಳ ನೀಡುತ್ತಿದ್ದರು ಎಂದು ರುಕ್ಮಿಣಿ ಕಡೆಯವರು ಆರೋಪಿಸಿದ್ದಾರೆ.
13 ವರ್ಷಗಳ ಹಿಂದೆ ಕಡೂರಿನ ಕಣ್ಣನ್ ಗೆ ಮಂಡ್ಯದ ರುಕ್ಮಿಣಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು.
ರುಕ್ಮಿಣಿಗೆ ಹಲ್ಲೆ ಮಾಡಿರುವುದನ್ನು ಆಕೆಯ ಸಾವಿನ ನಂತರ ಪತಿ ಕಣ್ಣನ್ ಒಪ್ಪಿಕೊಂಡಿರುವ ಆಡಿಯೋವೊಂದು ಲಭ್ಯವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು