2:46 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಡೂರು: ಗೃಹಿಣಿ ಅನುಮಾನಾಸ್ಪದ ಸಾವು; ಕೊಲೆ ಶಂಕೆ; ಎಸ್ಪಿ ಕಚೇರಿ ಎದುರು ಕಣ್ಣೀರಿಟ್ಟ ಹೆತ್ತಬ್ಬೆ

17/07/2023, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು,ನ್ಯಾಯಕ್ಕಾಗಿ ಹೆತ್ತವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಕಣ್ಣೀರಿಟ್ಟ ಘಟನೆ ನಡೆದಿದೆ.


ರುಕ್ಮಿಣಿ (31) ಅನುಮಾನಸ್ಪದವಾಗಿ ಸಾವನ್ನಪ್ಪಿದ ಗೃಹಿಣಿ. ನಿನ್ನೆ ಮಧ್ಯಾಹ್ನ 12 ಗಂಟೆಗೆ ರುಕ್ಮಿಣಿ ಅವರು ಸಾವನ್ನಪ್ಪಿದ್ದರು.
ಮಂಡ್ಯ ಜಿಲ್ಲೆಯ ರಾಗಿಮುದ್ದನಹಳ್ಳಿ ಮೂಲದ ರುಕ್ಮಿಣಿ ಅವರು ಮದುವೆಯಾಗಿ ಕಡೂರಿಗೆ ಬಂದಿದ್ದರು. ಮಂಡ್ಯದಿಂದ ಬಂದ ರುಕ್ಮಿಣಿ ಕುಟುಂಬಸ್ಥರು ಆಗಮಿಸಿದ್ದಾರೆ. ಮಗಳದ್ದು ಆತ್ಮಹತ್ಯೆಯಲ್ಲ. ಆತ್ಮಹತ್ಯೆಯೆಂದು ಪ್ರಕರಣ ಮರೆಮಾಚಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ದೂರು ದಾಖಲಿಸಿಕೊಳ್ಳಲು ಕಡೂರು ಪೊಲೀಸರ ಹಿಂದೇಟು ಹಾಕುತ್ತಿದ್ದಾರೆ ಎಂದು ದೂರಿದ್ದಾರೆ. ಗಂಡ ಕಣ್ಣನ್ ವಿರುದ್ಧ ಕೊಲೆ ಆರೋಪವನ್ನು ರುಕ್ಮಿಣಿ ಕುಟುಂಬಸ್ಥರು ಮಾಡಿದ್ದಾರೆ. ಮದುವೆ ಆದಾಗಿನಿಂದಲೂ ಮಗಳಿಗೆ ಅತ್ತೆ-ಮಾವ, ಗಂಡ ಕಿರುಕುಳ ನೀಡುತ್ತಿದ್ದರು ಎಂದು ರುಕ್ಮಿಣಿ ಕಡೆಯವರು ಆರೋಪಿಸಿದ್ದಾರೆ.
13 ವರ್ಷಗಳ ಹಿಂದೆ ಕಡೂರಿನ ಕಣ್ಣನ್ ಗೆ ಮಂಡ್ಯದ ರುಕ್ಮಿಣಿ ಅವರನ್ನು ಮದುವೆ ಮಾಡಿಕೊಡಲಾಗಿತ್ತು.
ರುಕ್ಮಿಣಿಗೆ ಹಲ್ಲೆ ಮಾಡಿರುವುದನ್ನು ಆಕೆಯ ಸಾವಿನ ನಂತರ ಪತಿ ಕಣ್ಣನ್ ಒಪ್ಪಿಕೊಂಡಿರುವ ಆಡಿಯೋವೊಂದು ಲಭ್ಯವಾಗಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು