3:38 AM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಕದ್ರಿ ದಕ್ಷಿಣ ವಾರ್ಡ್: 1 ಕೋಟಿ ವೆಚ್ಚದಲ್ಲಿ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್  ಭೂಮಿಪೂಜೆ

21/05/2022, 19:33

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ದಕ್ಷಿಣ ವಾರ್ಡಿನಲ್ಲಿ 1 ಕೋಟಿ ವೆಚ್ಚದಲ್ಲಿ ರಾಜಕಾಲುವೆಯ ಆಯ್ದ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಕುರಿತು ಮಾತನಾಡಿದ ಅವರು, ಕದ್ರಿ ಹಿಂದೂ ರುದ್ರಭೂಮಿಯಿಂದ ಕದ್ರಿ ರಾಕ್ಸ್ ವರೆಗೆ ರಾಜಕಾಲುವೆಯ ತಡೆಗೋಡೆ ಅಭಿವೃದ್ಧಿಗೆ ರಾಜ್ಯ ಸರಕಾರದ ಸಣ್ಣ ನೀರಾವರಿ ಇಲಾಖೆಯಿಂದ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಭಾಗದಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಯನ್ನು ಮನಗಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಕಾಮತ್ ಹೇಳಿದರು. 

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಕದ್ರಿ ಮನೋಹರ್ ಶೆಟ್ಟಿ, ಶಕಿಲಾ ಕಾವಾ, ಪ್ರಮುಖರಾದ ದಿನೇಶ್ ದೇವಾಡಿಗ, ಶ್ರೀಕಾಂತ್ ರಾವ್, ಶಾಲಿನಿ ವಿಶ್ವನಾಥ್ ಆಚಾರ್, ಕೃಷ್ಣ ಶೆಟ್ಟಿ, ವಸಂತ್ ಜೆ ಪೂಜಾರಿ, ದೇವಿಚರಣ್ ಶೆಟ್ಟಿ, ಮನೀಷ್ ಪಾಂಡ್ಯ, ಗೋಪಾಲ ಕೃಷ್ಣ ರಾವ್, ತುಳಸಿದಾಸ್ ಕದ್ರಿ, ಪ್ರದೀಪ್ ಆಚಾರ್ಯ, ಸೋಮನಾಥ್ ದೇವಾಡಿಗ, ಯಶವಂತ ನಾಯಕ್, ಗಾಡ್ವಿನ್,‌ಕೇಶವ ಕದ್ರಿ,‌ಪ್ರಕಾಶ್, ಚಂದ್ರಕಾಂತ್, ಜಗದೀಶ್ ಕದ್ರಿ, ಅವಿನಾಶ್ ರೈ, ಹೇಮಚಂದ್ರ, ಸಚಿನ್ ಕದ್ರಿ, ಕೌಶಿಕ್, ವಿವೇಕ್ ಕದ್ರಿ, ವಿನಯ್ ಕದ್ರಿ, ದಿವಾಕರ್ ಕದ್ರಿ, ಶಿವಪ್ಪ ನಂತೂರು, ರಂಜನ್, ಸತ್ಯನಾರಾಯಣ ರಾವ್, ನರೇಶ್ ರಾವ್, ವಿಜಯ್ ಭಂಡಾರಿ, ಸಂಜೀವ ಅಡ್ಯಾರ್, ವೆಂಕಟೇಶ್, ಕೌಶಿಕ್, ಅನಂತ್ ಅಂಚನ್, ನಾಗೇಶ್ ಕದ್ರಿ, ರವಿ, ದಿನೇಶ್ ದೇವಾಡಿಗ ಕಂಬ್ಳ, ರಾಘವೇಂದ್ರ ಬಿರ್ವತ್ತಾಯ, ಭೋಜ, ಜನಾರ್ದನ, ಸುನಿಲ್, ಅನಿಲ್, ದೀಪಕ್, ಅರುಣ್ ಕದ್ರಿ, ರೋಷನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು