4:50 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ

24/03/2022, 14:27

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಕಾಣಿಕೆ ಹುಂಡಿ ಹಗರಣ ಬೆಳಕಿಗೆ ಬಂದ ಬಳಿಕ ಗುರುವಾರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ನಡೆಯುತ್ತಿದ್ದು, ಹುಂಡಿ ಹಣ ಕದ್ದ ಆರೋಪದ ಕಳಂಕಿತ ಮಹಿಳಾ ಟ್ರಸ್ಟಿ ಆಗಮಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10. 30ಕ್ಕೆ ದೇವಸ್ಥಾನದ ಮಂಜುಶ್ರೀ ಸಭಾಬವನದಲ್ಲಿ ಹುಂಡಿ ಎಣಿಕೆ ಆರಂಭವಾಗಿದ್ದು, ಆಡಳಿತಾಧಿಕಾರಿ ಮತ್ತು ಒಬ್ಬರೇ ಟ್ರಸ್ಟಿ ಮನೋಹರ್ ಸುವರ್ಣ ಇದ್ದರು. 

ಸ್ವಲ್ಪ ಹೊತ್ತಿನ ಬಳಿಕ ಕಳಂಕಿತ ಮಹಿಳಾ ಟ್ರಸ್ಟಿ ಎಣಿಕೆ ನಡೆಯುತ್ತಿದ್ದ ಹಾಲ್ ಗೆ ಆಗಮಿಸಿದರು. ಇದಕ್ಕೆ ಆಡಳಿತಾಧಿಕಾರಿ ಬಳಿ ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ವಲ್ಪ ಸಮಯ ಕುಳಿತ ಬಳಿಕ ಆರೋಪಕ್ಕೊಳಗಾಗಿರುವ ಟ್ರಸ್ಟಿ ವಾಪಸ್ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಇನ್ನೊಬ್ಬ ಟ್ರಸ್ಟಿಯವರು ಮಹಿಳಾ ಟ್ರಸ್ಟಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಿಂದ ನೇರವಾಗಿ ಹುಂಡಿ ಎಣಿಕೆ ನಡೆಯುವ ಕೊಠಡಿಗೆ ಮಹಿಳಾ ಟ್ರಸ್ಟಿ ಆಗಮಿಸಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು