3:17 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕದ್ರಿ ದೇಗುಲ: ಊಟಕ್ಕೆ ಬಂದ ವಿದ್ಯಾರ್ಥಿಗಳಿಂದ ಹುಂಡಿ ಹಣ ಎಣಿಕೆ; ಕಳಂಕಿತ ಮಹಿಳಾ ಟ್ರಸ್ಟಿ ಆಗಮನಕ್ಕೆ ಆಕ್ಷೇಪ

24/03/2022, 14:27

ಮಂಗಳೂರು(reporterkarnataka.com): ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಕದ್ರಿ ಮಂಜುನಾಥ ಕ್ಷೇತ್ರದಲ್ಲಿ ಈ ಬಾರಿ ಹುಂಡಿ ಎಣಿಕೆಗೆ ಜನ ಬಾರದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಊಟಕ್ಕೆ ಬಂದ ವಿದ್ಯಾರ್ಥಿಗಳಿಂದಲೇ ಕಾಣಿಕೆ ಹಣ ಲೆಕ್ಕ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ.

ಕದ್ರಿ ಶ್ರೀ ಮಂಜುನಾಥ ಕ್ಷೇತ್ರದಲ್ಲಿ ಕಾಣಿಕೆ ಹುಂಡಿ ಹಗರಣ ಬೆಳಕಿಗೆ ಬಂದ ಬಳಿಕ ಗುರುವಾರ ಕ್ಷೇತ್ರದಲ್ಲಿ ಹುಂಡಿ ಎಣಿಕೆ ನಡೆಯುತ್ತಿದ್ದು, ಹುಂಡಿ ಹಣ ಕದ್ದ ಆರೋಪದ ಕಳಂಕಿತ ಮಹಿಳಾ ಟ್ರಸ್ಟಿ ಆಗಮಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.

ಬೆಳಗ್ಗೆ 10. 30ಕ್ಕೆ ದೇವಸ್ಥಾನದ ಮಂಜುಶ್ರೀ ಸಭಾಬವನದಲ್ಲಿ ಹುಂಡಿ ಎಣಿಕೆ ಆರಂಭವಾಗಿದ್ದು, ಆಡಳಿತಾಧಿಕಾರಿ ಮತ್ತು ಒಬ್ಬರೇ ಟ್ರಸ್ಟಿ ಮನೋಹರ್ ಸುವರ್ಣ ಇದ್ದರು. 

ಸ್ವಲ್ಪ ಹೊತ್ತಿನ ಬಳಿಕ ಕಳಂಕಿತ ಮಹಿಳಾ ಟ್ರಸ್ಟಿ ಎಣಿಕೆ ನಡೆಯುತ್ತಿದ್ದ ಹಾಲ್ ಗೆ ಆಗಮಿಸಿದರು. ಇದಕ್ಕೆ ಆಡಳಿತಾಧಿಕಾರಿ ಬಳಿ ಆಕ್ಷೇಪ ವ್ಯಕ್ತಪಡಿಸಲಾಯಿತು. ಸ್ವಲ್ಪ ಸಮಯ ಕುಳಿತ ಬಳಿಕ ಆರೋಪಕ್ಕೊಳಗಾಗಿರುವ ಟ್ರಸ್ಟಿ ವಾಪಸ್ ತೆರಳಿದ್ದಾರೆ ಎಂದು ತಿಳಿದು ಬಂದಿದೆ.

ಈ ನಡುವೆ ಇನ್ನೊಬ್ಬ ಟ್ರಸ್ಟಿಯವರು ಮಹಿಳಾ ಟ್ರಸ್ಟಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಠಾಣೆಯಿಂದ ನೇರವಾಗಿ ಹುಂಡಿ ಎಣಿಕೆ ನಡೆಯುವ ಕೊಠಡಿಗೆ ಮಹಿಳಾ ಟ್ರಸ್ಟಿ ಆಗಮಿಸಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು