9:41 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಕದ್ರಿಕಂಬಳ: ವೃದ್ಧ ಸಹೋದರಿಯರು ನೇಣು ಬಿಗಿದು ಆತ್ಮಹತ್ಯೆ

04/10/2023, 18:18

ಮಂಗಳೂರು(reporterkarnataka.com): ಕದ್ರಿಕಂಬಳ ಬಳಿ ಮನೆಯೊಂದರಲ್ಲಿ ಇಬ್ಬರು ವೃದ್ಧ ಮಹಿಳೆಯರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.
ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಿರುವ ಜಗನ್ನಾಥ್ ಭಂಡಾರಿ(78) ಎಂಬವರ ಪತ್ನಿ ಲತಾ ಭಂಡಾರಿ (70) ಹಾಗೂ ಲತಾ ಭಂಡಾರಿ ಅವರ ಅಕ್ಕ ಸುಂದರಿ ಶೆಟ್ಟಿ (80) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ತಿಳಿದು ಬಂದಿದೆ.
ಜಗನ್ನಾಥ್ ಭಂಡಾರಿ ಅವರು ಎಂದಿನಂತೆ ಮಂಗಳೂರಿನ ಯಶ್ ರಾಜ್ ಬಾರಿಗೆ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆ ಮನೆಗೆ ಬಂದಾಗ ಮನೆಯ ಬಾಗಿಲು ಬಂದ್ ಆಗಿತ್ತು. ಕಿಟಕಿಯಿಂದ ಒಳಗೆ ನೋಡಿದಾಗ ಲತಾ ಭಂಡಾರಿ ಹಾಗೂ ಸುಂದರಿ ಭಂಡಾರಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದರು ಎಂದು ತಿಳಿದು ಬಂದಿದೆ.
ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು