9:24 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಕದ್ರಿ ಮಂಜುನಾಥ ದೇವಸ್ಥಾನ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದ ಸಮಿತಿಗೆ ಒಪ್ಪಿಸಿ: ಮಾಜಿ ಮೇಯರ್‌ ಹರಿನಾಥ್‌ 

17/01/2022, 16:00

ಮಂಗಳೂರು(reporterkarnataka.com): ನಗರದ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮಾಜಿ ಮೇಯರ್‌ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್‌ ಒತ್ತಾಯಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಹಾಗೂ ಧಾರ್ಮಿಕ ದತ್ತಿ ಇಲಾಖಾ ಮಂತ್ರಿಗಳು ಎಲ್ಲಾ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳನ್ನು ಆಯಾಯ ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕು. ಕದ್ರಿ ದೇವಸ್ಥಾನ ಮತ್ತು ಕದ್ರಿ ಮಠಕ್ಕೆ ಮೊದಲಿನಿಂದಲೂ ಉತ್ತಮ ಸಂಬಂಧವಿದೆ. ಈ ಹಿಂದೆ ನಮ್ಮ ಮಠಕ್ಕೆ ಸಂಬಂಧಪಟ್ಟಿತ್ತು. ಸರ್ಕಾರ ಅಂತಹ ನಿರ್ಧಾರ ಮಾಡಿದರೆ ಅದರ ಮೊದಲ ಹಕ್ಕುದಾರರು ನಾವಾಗಿರುತ್ತೇವೆ. ಆದಕ್ಕೆ ದಾಖಲೆ-ಇತಿಹಾಸ ಇದೆ ಎಂದರು.

ಸರ್ಕ್ಯೂಟ್‌ ಹೌಸ್‌ನಿಂದ ಪದವು ಹೈಸ್ಕೂಲ್‌ವರೆಗಿನ ಜೋಗಿ ಮಠದ ರಸ್ತೆ ಎಂದು ನಾಮಕರಣ ಮಾಡಿತ್ತು. ಆದರೆ ಸ್ಮಾರ್ಟ್‌ ಸಿಟಿಯ ಕೆಲಸದ ವೇಳೆ ಆ ಫಲಕವನ್ನು ಕಿತ್ತು ಬಿಸಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು