1:08 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಕದ್ರಿ ಮಂಜುನಾಥ ದೇವಸ್ಥಾನ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದ ಸಮಿತಿಗೆ ಒಪ್ಪಿಸಿ: ಮಾಜಿ ಮೇಯರ್‌ ಹರಿನಾಥ್‌ 

17/01/2022, 16:00

ಮಂಗಳೂರು(reporterkarnataka.com): ನಗರದ ಇತಿಹಾಸ ಪ್ರಸಿದ್ಧ ಕ್ಷೇತ್ರವಾದ ಕದ್ರಿಯಲ್ಲಿರುವ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಯೋಗೀಶ್ವರ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕೆಂದು ಮಾಜಿ ಮೇಯರ್‌ ಹಾಗೂ ಕದ್ರಿ ಯೋಗೀಶ್ವರ ಮಠದ ಅಧ್ಯಕ್ಷ ಹರಿನಾಥ್‌ ಒತ್ತಾಯಿಸಿದ್ದಾರೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗೆ ಮುಖ್ಯಮಂತ್ರಿ ಹಾಗೂ ಧಾರ್ಮಿಕ ದತ್ತಿ ಇಲಾಖಾ ಮಂತ್ರಿಗಳು ಎಲ್ಲಾ ಧಾರ್ಮಿಕ ಮತ್ತು ದತ್ತಿ ಇಲಾಖೆಯ ಆಡಳಿತಕ್ಕೆ ಒಳಪಟ್ಟ ದೇವಸ್ಥಾನಗಳನ್ನು ಆಯಾಯ ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದ್ದರಿಂದ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದ ಆಡಳಿತವನ್ನು ಕದ್ರಿ ಮಠದಲ್ಲಿರುವ ಸಮಿತಿಗೆ ಒಪ್ಪಿಸಬೇಕು. ಕದ್ರಿ ದೇವಸ್ಥಾನ ಮತ್ತು ಕದ್ರಿ ಮಠಕ್ಕೆ ಮೊದಲಿನಿಂದಲೂ ಉತ್ತಮ ಸಂಬಂಧವಿದೆ. ಈ ಹಿಂದೆ ನಮ್ಮ ಮಠಕ್ಕೆ ಸಂಬಂಧಪಟ್ಟಿತ್ತು. ಸರ್ಕಾರ ಅಂತಹ ನಿರ್ಧಾರ ಮಾಡಿದರೆ ಅದರ ಮೊದಲ ಹಕ್ಕುದಾರರು ನಾವಾಗಿರುತ್ತೇವೆ. ಆದಕ್ಕೆ ದಾಖಲೆ-ಇತಿಹಾಸ ಇದೆ ಎಂದರು.

ಸರ್ಕ್ಯೂಟ್‌ ಹೌಸ್‌ನಿಂದ ಪದವು ಹೈಸ್ಕೂಲ್‌ವರೆಗಿನ ಜೋಗಿ ಮಠದ ರಸ್ತೆ ಎಂದು ನಾಮಕರಣ ಮಾಡಿತ್ತು. ಆದರೆ ಸ್ಮಾರ್ಟ್‌ ಸಿಟಿಯ ಕೆಲಸದ ವೇಳೆ ಆ ಫಲಕವನ್ನು ಕಿತ್ತು ಬಿಸಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು